Advertisement

ಕೆರೆಗಳ ಭರ್ತಿಗೆ ಪೈಲಟ್‌ ಯೋಜನೆ

07:50 AM Jul 15, 2018 | Team Udayavani |

ಮಂಡ್ಯ: ಕಾವೇರಿ ಜಲಾನಯನ ವ್ಯಾಪ್ತಿಯ ಎಲ್ಲ ಕೆರೆಗಳನ್ನು ತುಂಬಿಸಲು ಪೈಲಟ್‌ ಯೋಜನೆ ರೂಪಿಸಲಾಗುವುದು ಎಂದು ಸಣ್ಣ ನೀರಾವರಿ ಸಚಿವ ಸಿ.ಎಸ್‌.ಪುಟ್ಟರಾಜು ತಿಳಿಸಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ರಾಜ್ಯದಲ್ಲಿ ಈಗಾಗಲೇ ಶೇ.60ರಷ್ಟು ಕೆರೆಗಳು ತುಂಬಿವೆ.ಉಳಿದಂತೆ ಎಲ್ಲ ಕೆರೆಗಳನ್ನು ತುಂಬಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ.

ನದಿ ಅಥವಾ ಕಾಲುವೆ ಮೂಲಕ ಕೆಲವು ಕೆರೆಗಳಿಗೆ ನೇರವಾಗಿ ನೀರು ಹರಿಸಲಾಗುತ್ತಿದೆ. ಆದರೆ, ಕೆಲವು ಕೆರೆಗಳಿಗೆ ಕಾಲುವೆಯಿಂದ ನೀರು ಹರಿಸಲು ಸಾಧ್ಯ ವಾಗುವುದಿಲ್ಲ. ಅಂಥ ಕೆರೆಗಳಿಗೆ ಪೈಪ್‌ಲೈನ್‌ ಮೂಲಕ ತುಂಬಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಪೈಲಟ್‌ ಯೋಜನೆ ರೂಪಿಸುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next