Advertisement

ಮೂಲಸೌಕರ್ಯ ಯೋಜನೆಗಳನ್ನು ಟಾರ್ಗೆಟ್‌ ಮಾಡಲು ಪಿಐಎಲ್‌ ಬಳಕೆ

10:38 PM Dec 16, 2022 | Team Udayavani |

ನವದೆಹಲಿ: ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು (ಪಿಐಎಲ್‌) ಹಲವು ಬಾರಿ ಮೂಲಸೌಕರ್ಯ ಯೋಜನೆಗಳನ್ನು ಟಾರ್ಗೆಟ್‌ ಮಾಡಿಕೊಂಡು ಸಲ್ಲಿಸುತ್ತಿರುವ ಪ್ರಸಂಗಗಳು ಹೆಚ್ಚಾಗುತ್ತಿವೆ ಎಂದು ಸುಪ್ರೀಂ ಕೋರ್ಟ್‌ ಶುಕ್ರವಾರ ಅಭಿಪ್ರಾಯಪಟ್ಟಿದೆ.

Advertisement

ಮುಂಬೈನ ಭೂಮಿಯೊಂದರ ನವೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಪಿಐಎಲ್‌ ಅನ್ನು ವಜಾ ಮಾಡುವ ವೇಳೆ ಸಿಜೆಐ ಡಿ.ವೈ.ಚಂದ್ರಚೂಡ್‌ ನೇತೃತ್ವದ ನ್ಯಾಯಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ.

ಮೂಲಸೌಕರ್ಯ ಯೋಜನೆಗಳ ವಿಚಾರ ಬಂದಾಗ ಪಿಐಎಲ್‌ಗ‌ಳು ಬ್ಲ್ಯಾಕ್‌ವೆುàಲ್‌ ಮಾಡುವ ಒಂದು ಸಾಧನವಾಗಿ ಬದಲಾಗಿವೆ. ಅಂಥ ಯೋಜನೆಗಳನ್ನು ಟಾರ್ಗೆಟ್‌ ಮಾಡಲೆಂದೇ ಅರ್ಜಿಗಳು ಸಲ್ಲಿಕೆಯಾಗುತ್ತಿವೆ. ಇದು ದೆಹಲಿ, ಮುಂಬೈ ಸೇರಿದಂತೆ ಹಲವು ಕಡೆ ನಡೆಯುತ್ತಿವೆ ಎಂದೂ ನ್ಯಾಯಪೀಠ ಅಸಮಾಧಾನ ವ್ಯಕ್ತಪಡಿಸಿದೆ.

ಮುಂಬೈನ ವರ್ಲಿಯಲ್ಲಿನ ಜಮೀನೊಂದರ ನವೀಕರಣವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಪಿಐಎಲ್‌ ಅನ್ನು ಬಾಂಬೆ ಹೈಕೋರ್ಟ್‌ ವಜಾ ಮಾಡಿತ್ತು. ಅದನ್ನು ಪ್ರಶ್ನಿಸಿ ಅರ್ಜಿದಾರರು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು. ಈಗ ಸರ್ವೋಚ್ಚ ನ್ಯಾಯಾಲಯ ಬಾಂಬೆ ಹೈಕೋರ್ಟ್‌ ಆದೇಶವನ್ನು ಎತ್ತಿಹಿಡಿದಿದೆ.

Advertisement

Udayavani is now on Telegram. Click here to join our channel and stay updated with the latest news.

Next