Advertisement

ಪಿರಿಯಾಪಟ್ಟಣ : ಕಾರು ಚಾಲಕನ ಅಜಾಗರೂಕತೆಯ ಚಾಲನೆಗೆ ಬೈಕ್ ಸವಾರ ಸಾವು

09:03 PM Apr 27, 2022 | Team Udayavani |

ಪಿರಿಯಾಪಟ್ಟಣ : ಕಾರು ಡಿಕ್ಕಿ ಹೊಡೆದು ಬೈಕ್ ಸವಾರನೊಬ್ಬ ಮೃತಪಟ್ಟಿರುವ ಘಟನೆ ಬಿ.ಎಂ.ರಸ್ತೆಯ ಚೌಡೇನಹಳ್ಳಿ ಗ್ರಾಮದ ಬಳಿ ನಡೆದಿದೆ.

Advertisement

ಪಿರಿಯಾಪಟ್ಟಣದ ನವಿಲೂರು ನಿವಾಸಿ ಮೈಲಾರೀಗೌಡ (56 ವರ್ಷ) ಮೃತ ದುರ್ದೈವಿ.

ಮೈಲಾರೀಗೌಡ ಪಿರಿಯಾಪಟ್ಟಣದಿಂದ ನವಿಲೂರು ಗ್ರಾಮಕ್ಕೆ ದ್ವಿಚಕ್ರವಾಹನದಲ್ಲಿ ತೆರಳುತ್ತಿರುವಾಗ ಬಿ.ಎಂ.ರಸ್ತೆಯ ಚೌಡೇನಹಳ್ಳಿ ಗ್ರಾಮದ ಬಳಿ ಹಿಂಬದಿಯಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ ಪರಿಣಾಮ, ಮೈಲಾರಿಗೌಡ ಬೈಕ್‌ನಿಂದ ಬಿದ್ದು ಗಂಭೀರ ಗಾಯಗೊಂಡಿದ್ದರು,

ಕೂಡಲೇ ಅವರಿಗೆ ಪಿರಿಯಾ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ಕರೆದೊಯ್ಯವ ವೇಳೆ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ : ಕೇನ್ಸ್‌ ಚಲನಚಿತ್ರೋತ್ಸವದಲ್ಲಿ ದೀಪಿಕಾ ತೀರ್ಪುಗಾರ್ತಿ

Advertisement

ಪಿರಿಯಾಪಟ್ಟಣ ಅಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬದವರಿಗೆ ಮೃತದೇಹ ನೀಡಲಾಗಿದೆ.

ಘಟನೆಯ ಕುರಿತಂತೆ ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next