Advertisement

ಪಿರಿಯಾಪಟ್ಟಣ : ಬೆಳೆ ಹಾನಿ ಪ್ರದೇಶಕ್ಕೆ ಹೆಚ್ಚಿನ ನೆರವು ನೀಡಿ : ಮುಖ್ಯಮಂತ್ರಿಗಳಿಗೆ ಮನವಿ

08:20 PM Jul 12, 2022 | Team Udayavani |

ಪಿರಿಯಾಪಟ್ಟಣ : ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳ ವೀಕ್ಷಣೆಗಾಗಿಗೆ ಮಂಗಳವಾರ ತೆರಳುತ್ತಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿಯವರಿಗೆ ಶಾಸಕ ಕೆ.ಮಹದೇವ್ ಹಾಗೂ ಅಧಿಕಾರಿಗಳು ತಾಲ್ಲೂಕಿನಲ್ಲಿ ಬೆಳೆ ಹಾನಿಯಾಗಿರುವ ಕುರಿತು ಮನವಿ ಸಲ್ಲಿಸಿದರು.

Advertisement

ಅತಿವೃಷ್ಠಿ ಹಾಗೂ ಪ್ರಕೃತಿ ವಿಕೋಪಕ್ಕೆ ಸಿಲುಕಿ ತಾಲ್ಲೂಕಿನ ಕಾವೇರಿ ನದಿಪ್ರಾಂತ್ಯದ ಗ್ರಾಮಗಳಾದ ಕೊಪ್ಪ, ದಿಂಡಗಾಡು, ಆವರ್ತಿ, ಚಾಮರಾಯನಕೋಟೆ, ಹೊನ್ನಾಪುರ ಸೇರಿದಂತೆ ತಾಲ್ಲೂಕಿನ ಸುಮಾರು 25 ಸಾವಿರ ಎಕರೆ ಪ್ರದೇಶದಲ್ಲಿ ರೈತರು ಬೆಳೆದಿದ್ದ ತಂಬಾಕು, ಶುಂಠಿ, ಮುಸುಕಿನಜೋಳ, ದ್ವಿದಳಧಾನ್ಯಗಳು, ಹೂವಿನ ಬೆಳೆ ಸೇರಿದಂತೆ ತೋಟಗಾರಿಕಾ ಬೆಳೆ ಹಾಗೂ ಸುಮಾರು 219ಕ್ಕೂ ಹೆಚ್ಚು ಮನೆಗಳು ಮಳೆಗೆ ಬಿದ್ದುಹೋಗಿವೆ, ಜಾನುವಾರುಗಳು, ಲೋಕೋಪಯೋಗಿ ರಸ್ತೆಗಳು, ಸೇತುವೆಗಳು ಮುಳುಗಡೆಯಾಗಿದ್ದು ರೈತರು ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ ಕೂಡಲೇ ಇವರಿಗೆ ಎನ್.ಡಿ.ಆರ್.ಎಫ್ ಹಾಗೂ ಎಸ್.ಡಿ.ಆರ್.ಎಫ್ ನಲ್ಲಿ ರಕ್ಷಣಾ ಮತ್ತು ಪರಿಹಾರ ಕಾರ್ಯಗಳಿಗೆ ಅನುದಾನದ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಚೇತನ್, ತಹಶೀಲ್ದಾರ್ ಚಂದ್ರಮೌಳಿ, ತಾಪಂ ಇಒ ಕೃಷ್ಣ ಕುಮಾರ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಸಾರ್ವಜನಿಕರು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next