Advertisement

ಗೂಡ್ಸ್ ವಾಹನ ಢಿಕ್ಕಿ ಹೊಡೆದು ಬೈಕ್ ಸವಾರ ಸಾವು, ಇನ್ನೋರ್ವನಿಗೆ ಗಾಯ

09:44 PM May 19, 2022 | Team Udayavani |

ಹುಣಸೂರು : ಗೂಡ್ಸ್ ವಾಹನ ಢಿಕ್ಕಿ ಹೊಡದ ಪರಿಣಾಮ ತೀವ್ರ ಗಾಯಗೊಂಡಿದ್ದ ಬೈಕ್ ಸವಾರ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿದ ಘಟನೆ ನಡೆದಿದೆ.

Advertisement

ಪಿರಿಯಾಪಟ್ಟಣ ತಾಲೂಕು ರಾವಂದೂರು ಹೋಬಳಿಯ ಆರ್.ಹೊಸಳ್ಳಿಯ ಲೇ.ವೆಂಕಟಯ್ಯರ ಪುತ್ರ ಶ್ರೀನಿವಾಸ್(53) ಮೃತಪಟ್ಟ ದುರ್ದೈವಿ.

ಘಟನೆ ವಿವರ: ಶ್ರೀನಿವಾಸ್‌ ತನ್ನ ಬೈಕ್‌ನಲ್ಲಿ ತನ್ನ ಸ್ನೇಹಿತ ಸ್ವಾಮಿಯೊಂದಿಗೆ ಮೈಸೂರಿನಿಂದ ಹುಣಸೂರು ಕಡೆಗೆ ಬರುತ್ತಿದ್ದ ವೇಳೆ ರಾಷ್ಟ್ರೀಯ ಹೆದ್ದಾರಿ 275 ರ ಎಪಿಎಂಸಿ ಬಳಿಯ ತಿರುಮಲ ಬಡಾವಣೆ ಎದುರು ಹಿಂದಿನಿಂದ ಹೆದ್ದಾರಿಯಲ್ಲಿ ಪಿರಿಯಾಪಟ್ಟಣದ ಕಡೆ ತೆರಳುತ್ತಿದ್ದ ಗೂಡ್ಸ್ ವಾಹನ ಡಿಕ್ಕಿ ಹೊಡೆದಿದೆ ಪರಿಣಾಮ ತಲೆಗೆ ತೀವ್ರ ಪೆಟ್ಟಾಗಿದ್ದು. ಹುಣಸೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸಾಗಿ ಮೈಸೂರಿನ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾರೆ. ಹಿಂಬದಿಯ ಸವಾರನಿಗೂ ಗಾಯಗಳಾಗಿದ್ದು, ಹುಣಸೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.

ಈ ಸಂಬಂಧ ನಗರ ಠಾಣೆ ಪೋಲಿಸ್ ಇನ್ಸ್ ಪೆಕ್ಟರ್ ಶ್ರೀನಿವಾಸ್ ಪ್ರಕರಣ ದಾಖಲಿಸಿಕೊಂಡು ವಾಹನಗಳನ್ನು ವಶಕ್ಕೆ ಪಡೆದು ಮುಂದಿನ ಕ್ರಮಕೈಗೊಂಡಿದ್ದಾರೆ.

ಇದನ್ನೂ ಓದಿ : ಕುಂಬಳೆ: ಪ್ರಯಾಣಿಕರ ಸರ ಕಳವು ಮಾಡುತ್ತಿದ್ದ ಇಬ್ಬರು ಕಳ್ಳರ ಬಂಧನ

Advertisement
Advertisement

Udayavani is now on Telegram. Click here to join our channel and stay updated with the latest news.

Next