Advertisement

ಕೋವಿಡ್ ವಿರುದ್ಧದ ಹೋರಾಟದ ಸಂದರ್ಭದಲ್ಲಿ ಕೆಳ ಮಟ್ಟದ ರಾಜಕೀಯ ಮಾಡಬೇಡಿ : ಗೋಯಲ್ ಕಿಡಿ

04:56 PM Jul 02, 2021 | Team Udayavani |

ನವ ದೆಹಲಿ : ಕೇಂದ್ರ ಸರ್ಕಾರದ ಕೋವಿಡ್ ನಿರ್ವಹಣೆಯ ಬಗ್ಗೆ ಮೇಲಿಂದ ಮೇಲೆ ಟೀಕೆ ಮಾಡುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ವಿರುದ್ಧ ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಹರಿಹಾಯ್ದಿದ್ದಾರೆ.

Advertisement

ತಮ್ಮ ಅಧಿಕೃತ ಟ್ವಿಟರ್ ಖಾತೆಯ ಮೂಲಕ ರಾಹುಲ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅವರು, ಕೋವಿಡ್ 19 ನಂತಹ ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲೂ ರಾಜಕೀಯ ಮಾಡುವುದು ಸರಿಯಲ್ಲ. ಈ ಸಂಕಷ್ಟದ ದಿನಗಳ ಮಟ್ಟಿಗಾದರೂ ರಾಜಕೀಯ ಮಾಡುವುದನ್ನು ನಿಲ್ಲಿಸಿ. ಕೋವಿಡ್ 19 ವಿರುದ್ಧದ ಹೋರಾಟದ ಸಂದರ್ಭದಲ್ಲಿ ಇಂತಹ ಕೆಳ ಮಟ್ಟದ ರಾಜಕಾರಣ ಮಾಡಬೇಡಿ ಎಂದು ವಾಗ್ದಾಳಿ ಮಾಡಿದ್ದಾರೆ.

ಇದನ್ನೂ ಓದಿ : ನಿರ್ಮಲಾ ಸೀತಾರಾಮನ್ ಭೇಟಿಯಾಗಿ ಜಿಎಸ್ ಟಿ ಪರಿಹಾರ ಬಾಕಿ ಬಿಡುಗಡೆಗೆ ಮನವಿ ಮಾಡಿದ ಬೊಮ್ಮಾಯಿ

ಜುಲೈನಲ್ಲಿ 12 ಕೋಟಿ ಲಸಿಕೆ ಪ್ರಮಾಣ ಲಭ್ಯವಿರುತ್ತದೆ. 15 ದಿನಗಳ ಹಿಂದೆಯೇ ರಾಜ್ಯಗಳಿಗೆ ಸರಬರಾಜು ಬಗ್ಗೆ ಮಾಹಿತಿ ನೀಡಲಾಗಿದೆ. ಖಾಸಗಿ ಆಸ್ಪತ್ರೆಗಳಿಗೆ ಲಸಿಕೆಗಳು ಪ್ರತ್ಯೇಕವಾಗಿ ಸರಬರಾಜು ಮಾಡಲಾಗುತ್ತದೆ.  ಕೋವಿಡ್ ವಿರುದ್ಧದ ಹೋರಾಟದ ಸಂದರ್ಭದಲ್ಲಿ ನಿಮ್ಮ ಕೀಳು ರಾಜಕೀಯವು ಸರಿಯಲ್ಲ ಎಂದು ರಾಹುಲ್ ಗಾಂಧಿ ಅರ್ಥಮಾಡಿಕೊಳ್ಳಬೇಕು ಎಂದು ಗೋಯಲ್ ಟ್ವೀಟ್ ಮಾಡಿದ್ದಾರೆ.

ಇನ್ನು, ಗೋಯಲ್ ಟ್ವೀಟ್ ಗೆ ಪ್ರತಿಕ್ರಿಯೆಯಾಗಿ ಟ್ವೀಟ್ ಮಾಡಿದ ವಯನಾಡಿನ ಸಂಸದ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಇದು ಜುಲೈ, ಲಸಿಕೆಗಳು ಎಲ್ಲಿವೆ..? ಎಂದು ಪ್ರಶ್ನೆ ಮಾಡಿದ್ದಾರೆ.

Advertisement

 

ಇದನ್ನೂ ಓದಿ : ಪುಲ್ವಾಮಾ: ಭದ್ರತಾ ಪಡೆಯ ಎನ್ ಕೌಂಟರ್ ಗೆ 5 ಲಷ್ಕರ್ ಉಗ್ರರ ಸಾವು, ಯೋಧ ಹುತಾತ್ಮ

Advertisement

Udayavani is now on Telegram. Click here to join our channel and stay updated with the latest news.

Next