Advertisement

ರೋಗನಿರೋಧಕ ಶಕ್ತಿ ಹೆಚ್ಚಿಸಲು ಯೋಜನೆ ರೂಪಿಸಿ: ಕಾಗೇರಿ

10:47 PM Aug 23, 2021 | Team Udayavani |

ಬೆಂಗಳೂರು: ವಿದ್ಯಾರ್ಥಿಗಳು ಮತ್ತು ಮಕ್ಕಳು ಕೊರೊನಾ ಸೋಂಕಿನಿಂದ ಬಾಧಿತರಾಗದಂತೆ  ಅವರಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಕ್ರಿಯಾಯೋಜನೆ ರೂಪಿಸಲು ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಸರಕಾರಕ್ಕೆ ಸಲಹೆ ನೀಡಿದ್ದಾರೆ.

Advertisement

ಈ ಕುರಿತು ಹೇಳಿಕೆ ನೀಡಿ ರುವ ಅವರು,  ಶಾಲೆ ಮತ್ತು ಕಾಲೇಜುಗಳನ್ನು ತೆರೆಯುವ ಸರಕಾರದ ನಿರ್ಧಾರ ಸ್ವಾಗ ತಾರ್ಹ. ಆದರೆ ಮಕ್ಕಳಲ್ಲಿ ಕೊರೊನಾ ಸಾಂಕ್ರಾಮಿಕ ನಿಗ್ರಹಿಸುವ ರೋಗನಿರೋಧಕ ಶಕ್ತಿ ಇದೆಯೇ ಎಂಬುದು ಖಾತ್ರಿಪಡಿಸಿಕೊಳ್ಳುವುದೂ ಅಷ್ಟೇ ಮುಖ್ಯ ಎಂದು ಹೇಳಿದ್ದಾರೆ.

ಶಾಲೆಗಳಲ್ಲಿ ಕೊರೊನಾ ಮಾರ್ಗಸೂಚಿ ಪಾಲಿಸಲಾಗು ತ್ತಿದೆಯೇ ಎಂಬುದನ್ನು ಪರಿಶೀಲಿಸಲು ಹಠಾತ್‌ ಭೇಟಿ ನೀಡುವ ಸಲುವಾಗಿ ಸರಕಾರ ಒಂದು ತಂಡ ರೂಪಿಸಬೇಕು. ಮಕ್ಕಳಲ್ಲಿ ರೋಗನಿರೋಧಕ ಶಕ್ತಿ ವರ್ಧಿಸುವ ಅಗತ್ಯದ ಕುರಿತು ಶಿಕ್ಷಕರು, ಶಿಕ್ಷಣ ಇಲಾಖೆಯ ಸಿಬಂದಿಗಿಂತ ಹೆಚ್ಚಾಗಿ ಪಾಲಕರಲ್ಲಿ ಜಾಗೃತಿ ಮೂಡಿಸುವುದು ಅಗತ್ಯ ಎಂದು ಪ್ರತಿಪಾದಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next