Advertisement

ಎತ್ತಿನಹೊಳೆ ಯೋಜನೆ ಮೇಲ್ಮನವಿ ಅರ್ಜಿ ವಜಾ

11:34 PM Sep 06, 2019 | Lakshmi GovindaRaju |

ಮಂಗಳೂರು: ಎತ್ತಿನಹೊಳೆ ನೀರಾವರಿ ಯೋಜನೆ ಕುರಿತು ಎನ್‌ಜಿಟಿ ನೀಡಿದ್ದ ಆದೇಶದ ವಿರುದ್ಧ ಸುಪ್ರೀಂಕೋರ್ಟ್‌ಗೆ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ನ್ಯಾಯಾಲಯ ಶುಕ್ರವಾರ ವಜಾಗೊಳಿಸಿದೆ. ಪರಿಸರವಾದಿ ಕೆ.ಎನ್‌.ಸೋಮಶೇಖರ್‌ ಅವರು ಆ.16ರಂದು ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಎತ್ತಿನಹೊಳೆ ಯೋಜನೆ ಕುಡಿಯುವ ನೀರಿಗೆ ಸಂಬಂಧಿಸಿದೆ. ಆದುದರಿಂದ ಅದಕ್ಕೆ ಅಡ್ಡಿ ಮಾಡುವುದು ಸರಿಯಲ್ಲ ಎನ್ನುವ ವಾದವನ್ನು ಪುರಸ್ಕರಿಸಿ ನ್ಯಾಯಾಲಯ ಮೇಲ್ಮನವಿ ಅರ್ಜಿಯನ್ನು ವಜಾಗೊಳಿಸಿದೆ.

Advertisement

ಮರು ಪರಿಶೀಲನಾ ಅರ್ಜಿ ಸಲ್ಲಿಸಲು ದೂರುದಾರರು ನಿರ್ಧರಿಸಿದ್ದಾರೆ. ಯೋಜನೆಯಲ್ಲಿ ನಡೆದಿರುವ ಭ್ರಷ್ಟಾಚಾರಕ್ಕೆ ಸಂಬಂಧಿಸಿ ಪ್ರತ್ಯೇಕ ಪ್ರಕರಣ ದಾಖಲಿಸಲು ನಿರ್ಧರಿಸಲಾಗಿದೆ. ಕಾನೂನು ತಜ್ಞರೊಂದಿಗೆ ಚರ್ಚಿಸಿ, ಹೈಕೋರ್ಟ್‌ ಅಥವಾ ಸುಪ್ರೀಂಕೋರ್ಟ್‌ನಲ್ಲಿ ದಾವೆ ಹೂಡುವ ಬಗ್ಗೆ ನಿರ್ಧರಿಸಲಾಗುವುದು. ಪ್ರಮುಖ ಹೋರಾಟಗಾರರು ಮತ್ತು ವಕೀಲರ ಜತೆ ಚರ್ಚೆ ನಡೆಸಿ ಮುಂದಿನ ಕಾನೂನು ಹೋರಾಟ ನಡೆಯಲಿದೆ ಎಂದು ಕೆ.ಎನ್‌.ಸೋಮಶೇಖರ್‌ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next