Advertisement

Ayodhya; ನಿಯಮ ಮೀರಿ ಆಯೋಜನೆ:ಪ್ರಾಣಪ್ರತಿಷ್ಠೆ ವಿರೋಧಿಸಿ ಹೈಕೋರ್ಟ್‌ನಲ್ಲಿ ಅರ್ಜಿ

12:59 AM Jan 19, 2024 | Team Udayavani |

ಲಕ್ನೋ: ಜ.22ರಂದು ನಡೆಯಲಿರುವ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆಯು ಸಾಂಪ್ರದಾಯಿಕ ಹಿಂದೂ ವಿಧಿವಿಧಾನಗಳಿಗೆ ವಿರುದ್ಧವಾಗಿದೆ ಎಂದು ಆರೋಪಿಸಿ ಅಲಹಾಬಾದ್‌ ಹೈಕೋರ್ಟ್‌ ಅರ್ಜಿಯೊಂದು ಸಲ್ಲಿಕೆಯಾಗಿದೆ.

Advertisement

ಉತ್ತರಪ್ರದೇಶದ ಗಾಜಿಯಾಬಾದ್‌ನ ನಿವಾಸಿಯೊಬ್ಬರು ಅರ್ಜಿ ಸಲ್ಲಿಸಿದ್ದಾರೆ. ಅರ್ಜಿದಾರರ ಪ್ರಕಾರ ಹಿಂದೂಧರ್ಮದಲ್ಲಿ  ಪುಷ್ಯ ಮಾಸದಲ್ಲಿ ಯಾವುದೇ ಧಾರ್ಮಿಕ ಸಮಾರಂಭಗಳನ್ನು ಮಾಡುವಂತಿಲ್ಲ ಆದಾಗ್ಯೂ ನಿಯಮಗಳನ್ನು ಮೀರಿ ಸಮಾರಂಭ ಆಯೋಜಿಸಲಾಗಿದೆ. ಅಲ್ಲದೇ ಮಂದಿರ ಇನ್ನೂ ನಿರ್ಮಾಣ ಹಂತದಲ್ಲಿ ಇರುವಾಗಲೇ ಪ್ರಾಣ ಪ್ರತಿಷ್ಠೆ ಮಾಡಲಾಗುತ್ತಿದೆ. ಇದು ಸಮಂಜಸವಲ್ಲ ಎಂದು ಉಲ್ಲೇಖೀಸಿದ್ದಾರೆ. ಜತೆಗೆ ಪ್ರಾಣ ಪ್ರತಿಷ್ಠೆಗೆ ಶಂಕರಾಚಾರ್ಯರು ಆಕ್ಷೇಪ ವ್ಯಕ್ತ ಪಡಿಸಿರುವುದನ್ನೂ ಅರ್ಜಿಯಲ್ಲಿ ಪ್ರಸ್ತಾವಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next