Advertisement

ಜೋಗ ಅಭಿವೃದ್ಧಿಗೆ ಯೋಜನೆ: ಡಿಸಿ

05:42 PM Sep 29, 2020 | Suhan S |

ಸಾಗರ: ವಿಶ್ವವಿಖ್ಯಾತ ಜೋಗ ಜಲಪಾತವನ್ನು ವಿಶ್ವದರ್ಜೆಯ ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸಲು ಅಗತ್ಯವಾದ ಯೋಜನೆಗಳನ್ನು ರೂಪಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ

Advertisement

ಶಿವಕುಮಾರ್‌ ತಿಳಿಸಿದರು. ತಾಲೂಕಿನ ಜೋಗದಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿದ ಮಾತನಾಡಿದ ಅವರು, ಜೋಗ ಜಲಪಾತವನ್ನು ಸರ್ವ ಋತು ಪ್ರವಾಸಿ ತಾಣವಾಗಿ ಆಭಿವೃದ್ಧಿಪಡಿಸಿದರೆ ವರ್ಷಪೂರ್ತಿ ಪ್ರವಾಸಿಗರಿಗೆ ಪ್ರಕೃತಿಯ ನೈಜ ಸೌಂದರ್ಯ ಸವಿಯಲು ಅವಕಾಶವಾಗುತ್ತದೆ. ವಿಶ್ವದೆಲ್ಲೆಡೆಯಿಂದಪ್ರವಾಸ ಪ್ರಿಯರು ಜೋಗದ ವೀಕ್ಷಣೆಗೆ  ಬರಲು ಅನುಕೂಲವಾಗುತ್ತದೆ. ಈ ವಿಚಾರವನ್ನು ಪ್ರಧಾನ ಕೇಂದ್ರವಾಗಿರಿಸಿ ನೀಲ ನಕ್ಷೆ ತಯಾರು ಮಾಡಲಾಗುತ್ತಿದೆ. ಸರ್ಕಾರ ಜಲಪಾತ ಪ್ರದೇಶದ ಅಭಿಬೃದ್ಧಿಗೆ ಈಗಾಗಲೇ 120 ಕೋಟಿ ರೂ. ಅನುದಾನವನ್ನು ನೀಡಿದೆ. ಅನುದಾನಗಳನ್ನು ಸಮರ್ಪಕವಾಗಿ ಬಳಸಿ, ಜನೋಪಯೋಗಿ ಕಾರ್ಯಕ್ಕೆ ವಿನಿಯೋಗ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಆದೇಶಿಸಲಾಗಿದೆ ಎಂದು ಅವರು ತಿಳಿಸಿದರು.

ಸಾಗರ ಉಪವಿಭಾಗದ ಸಹಾಯಕ ಆಯುಕ್ತ ಡಾ| ನಾಗರಾಜ್‌, ಪ್ರವಾಸೋದ್ಯಮ ಇಲಾಖೆಯ ಜಂಟಿ ನಿರ್ದೇಶಕ ಎಸ್‌.ಎಚ್‌. ರಾಮಕೃಷ್ಣ, ಕೆ.ಆರ್‌. ಶಿವಕುಮಾರ್‌, ಲಕ್ಷ್ಮೀನಾರಾಯಣ, ಸದಸ್ಯ ಕೆ.ಸಿ. ಹರೀಶ್‌ ಗೌಡ, ಜೆಎಂಎ ಮೇಲ್ವಿಚಾರಕ ಸರ್ಜಂಟ್‌ ನಿಸಾರ್‌, ಮಯೂರ ವ್ಯವಸ್ಥಾಪಕ ವಿಜಯೇಂದ್ರ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next