Advertisement

Srirangapatna: ಬಿಸ್ಲೆರಿ ನೀರಿನಲ್ಲಿ ನಾಟಿ ಕಾರ್ಯ !

11:41 AM Sep 04, 2023 | Team Udayavani |

ಶ್ರೀರಂಗಪಟ್ಟಣ: ತಮಿಳುನಾಡಿಗೆ ಕೆಆರ್‌ಎಸ್ ಜಲಾಶಯದಿಂದ ನೀರು ಬಿಡುಗಡೆ ಹಿನ್ನೆಲೆ ಕಾವೇರಿ ಕಿಚ್ಚು ಇಲ್ಲಿ ಮುಂದುವರೆದಿದ್ದು, ಮಂಡ್ಯ ರಕ್ಷಣಾ ವೇದಿಕೆ ಕಾರ್ಯಕರ್ತರಿಂದ ವಿನೂತನ ಪ್ರತಿಭಟನೆ ನಡೆಸಲಾಯಿತು.

Advertisement

ವೇದಿಕೆ ಅಧ್ಯಕ್ಷ ಶಂಕರ್ ಬಾಬು ನೇತೃತ್ವದಲ್ಲಿ ಬಿಸ್ಲೆರಿ ನೀರಿನಲ್ಲಿ ನಾಟಿ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ರೈತರ ಬೆಳೆಗಳಿಗೆ ನೀರು ಕೊಡುತ್ತಿಲ್ಲ, ತಮಿಳುನಾಡಿಗೆ ನೀರು ಹರಿಸುತ್ತಿದ್ದಾರೆ ಎಂದು ಆಕ್ರೋಶತರಾದ ರೈತರು, ಕಾರ್ಯಕರ್ತರು ಹನುಮಂತಪುರ ಗ್ರಾಮದ ಗದ್ದೆಯಲ್ಲಿ ನಾಟಿ ಮಾಡಿ ಆಕ್ರೋಶ  ವ್ಯಕ್ತಪಡಿಸಿದರು.

ಕಾವೇರಿ ನೀರು ಇಲ್ಲದೆ ಭತ್ತದ ನಾಟಿ ಮಾಡಲು ಆಗುತ್ತಿಲ್ಲ, ಬಿಸ್ಲೆರಿ ನೀರಿನಲ್ಲಿ ನಾಟಿ ಮಾಡುವ ಪರಿಸ್ಥಿತಿ ಬಂದಿದೆ ಎಂದು ಹೇಳಿ ಕೂಡಲೇ ನೀರು ನಿಲ್ಲಿಸಿ ರಾಜ್ಯ ಕಾಪಾಡಬೇಕು ಎಂದು ಆಗ್ರಹಿಸಿದರು.

ರೈತರ ಸಂಕಷ್ಟಕ್ಕೆ ಸ್ಪಂದಿಸದ ರಾಜ್ಯ ಸರ್ಕಾರದ ವಿರುದ್ದ ಕಿಡಿಕಾರಿ ಗ್ರಾಮದ ರಾಮಚಂದ್ರು ಎಂಬವರ ಜಮೀನಿನಲ್ಲಿ ನಾಟಿ ಮಾಡುವ ಮೂಲಕ ರಾಜ್ಯ ಸರ್ಕಾರದ ವಿರುದ್ದ ಘೋಷಣೆ ಕೂಗಿ  ಭತ್ತದ ನಾಟಿ ಮಾಡಿ, ಬಿಸ್ಲೇರಿ ನೀರೆರೆದು ಪ್ರತಿಭಟನೆ ನಡೆಸಿದರು.

ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿದ ಮಂಡ್ಯ ರಕ್ಷಣಾ ವೇದಿಕೆ ಒತ್ತಾಯ ಮಾಡಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next