Advertisement

ಕೋವಿಡ್‌ -19 ಪೀಡಿತರಿಗೆ ಪ್ಲಾಸ್ಮಾ ಚಿಕಿತ್ಸೆ

12:43 PM Apr 26, 2020 | Sriram |

ಬೆಂಗಳೂರು: ಕೋವಿಡ್‌ -19 ಸೋಂಕು ಪೀಡಿತರಿಗೆ ಹೆಚ್ಚು ಪರಿಣಾಮಕಾರಿ ಎಂದು ಸಾಬೀತಾ ಗಿರುವ ಪ್ಲಾಸ್ಮಾ ಚಿಕಿತ್ಸೆಗೆ ಶನಿವಾರ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಾಲನೆ ನೀಡಲಾಗಿದೆ.

Advertisement

ವೈದ್ಯಕೀಯ ಶಿಕ್ಷಣ ಸಚಿವ ಡಾ| ಕೆ. ಸುಧಾಕರ್‌ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀರಾಮುಲು ಈ ಉಪಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭ ಮಾತನಾಡಿದ ಸಚಿವ ಡಾ| ಸುಧಾಕರ್‌, ರಾಜ್ಯಕ್ಕೆ ಇದು ಐತಿಹಾಸಿಕ ಕ್ಷಣ. ಕೋವಿಡ್‌ -19 ಪೀಡಿತರಿಗೆ ಪ್ಲಾಸ್ಮಾ ಚಿಕಿತ್ಸೆ ಪರಿ ಣಾಮಕಾರಿಯಾಗುವುದು ಕಂಡುಬಂದಿದೆ.

ಪ್ಲಾಸ್ಮಾ ಚಿಕಿತ್ಸೆಯಿಂದ ಸೋಂಕುಪೀಡಿತರು ಗುಣ ಮುಖರಾದರೆ ಅತ್ಯಂತ ಸಂತೋಷ ಎಂದರು.

ಇದರ ಕ್ಲಿನಿಕಲ್‌ ಪ್ರಯೋಗ ಆರಂಭವಾಗಿದೆ. ಕೋವಿಡ್‌ನಿಂದ ಗುಣಮುಖರಾದ ವ್ಯಕ್ತಿಯೊಬ್ಬರು ಪ್ಲಾಸ್ಮಾ ನೀಡುವ ಮೂಲಕ ಚಿಕಿತ್ಸೆಗೆ ಸಹಕರಿಸಲು ಮುಂದೆ ಬಂದಿದ್ದಾರೆ. ಅವರಿಗೆ ಅಭಿನಂದನೆಗಳು ಎಂದು ಸಚಿವರು ಹೇಳಿದರು.

Advertisement

ಕೋವಿಡ್‌ -19ದಿಂದ ಗುಣ ಹೊಂದಿರುವವರು ಚಿಕಿತ್ಸೆಗೆ ಸಹಕರಿಸಬೇಕು. ಇಂಥವರು 2 ವಾರಗಳ ಅಂತರದಲ್ಲಿ ಕನಿಷ್ಠ ಇಬ್ಬರು ಅಥವಾ ಮೂವರಿಗೆ ಪ್ಲಾಸ್ಮಾ ನೆರವು ನೀಡಬಹುದು ಎಂದು ಸಚಿವರು ಮನವಿ ಮಾಡಿಕೊಂಡರು.

ಕೇರಳದಲ್ಲಿ ಯಶಸ್ವಿ
ಪ್ಲಾಸ್ಮಾ ಥೆರಪಿಯು ನೆರೆಯ ಕೇರಳ ರಾಜ್ಯದಲ್ಲಿ ಅತ್ಯಂತ ಯಶಸ್ವಿಯಾಗಿದೆ. ಹೀಗಾಗಿ ಕರ್ನಾಟಕದಲ್ಲೂ ಅನುಮತಿ ನೀಡುವಂತೆ ಕೋರಿ ಕೇಂದ್ರಕ್ಕೆ ಕರ್ನಾಟಕ ಸರಕಾರ ಮನವಿ ಸಲ್ಲಿಸಿತ್ತು. ಇತ್ತೀಚೆಗಷ್ಟೇ ಕೇಂದ್ರ ಸಾರ್ವಜನಿಕ ಆರೋಗ್ಯ ನಿರ್ದೇಶನಾಲಯವು ಬೆಂಗಳೂರು ಇನ್‌ಸ್ಟಿಟ್ಯೂಟ್‌ ಆಫ್‌ ಆಂಕಾಲಜಿಯ ವೈದ್ಯ ಡಾ| ವಿಶಾಲ್‌ ರಾವ್‌ ಅವರಿಗೆ ಪ್ಲಾಸ್ಮಾ ಚಿಕಿತ್ಸೆ ಒದಗಿಸಲು ಅನುಮತಿ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು. ಪ್ಲಾಸ್ಮಾ ಥೆರಪಿಯನ್ನು ಈ ಹಿಂದೆ ಎಬೋಲಾ ಮತ್ತು ಸ್ವೆ„ನ್‌ ಫ್ಲೂನಂತಹ ಕಾಯಿಲೆಗಳ ವಿರುದ್ಧ ಯಶಸ್ವಿಯಾಗಿ ಉಪಯೋಗಿಸಲಾಗಿದೆ.

ಏನಿದು ಪ್ಲಾಸ್ಮಾ ಥೆರಪಿ?
ಈಗಾಗಲೇ ಕೋವಿಡ್‌ -19 ತಗುಲಿ ಗುಣಮುಖರಾಗಿರುವ ವ್ಯಕ್ತಿಗಳ ರಕ್ತದಲ್ಲಿ ಉತ್ಪತ್ತಿ ಯಾಗಿರುವ ಪ್ರತಿಕಾಯ ( ಆ್ಯಂಟಿ ಬಾಡಿ)ಗಳನ್ನು ತೆಗೆದು, ಅವನ್ನು ಹಾಲಿ ಸೋಂಕಿಗೀಡಾಗಿರುವ ರೋಗಿಯ ರಕ್ತಕ್ಕೆ ನೀಡುವುದು. ರೋಗಿಯ ದೇಹ ಸೇರಿದ ಈ ಪ್ರತಿಕಾಯಗಳು ಅಲ್ಲಿ ಹೊಸ ಪ್ರತಿಕಾಯ ಉತ್ಪಾದನೆಯನ್ನು ಹೆಚ್ಚಿಸಿ ಕೋವಿಡ್‌ -19 ನಿವಾರಣೆಯಲ್ಲಿ ಸಹಕರಿಸುತ್ತವೆ.

Advertisement

Udayavani is now on Telegram. Click here to join our channel and stay updated with the latest news.

Next