Advertisement

ಸಂತೆಯಲಿ ಪ್ಲಾಸ್ಟಿಕ್‌ ಶೋಧ: ಬಿತ್ತು ದಂಡ

03:33 PM Jul 22, 2022 | Team Udayavani |

ವಾಡಿ: ಪಟ್ಟಣದಲ್ಲಿ ಗುರುವಾರ ನಡೆಯುತ್ತಿದ್ದ ವಾರದ ಸಂತೆಯಲ್ಲಿ ನಿಷೇಧಿತ ಪ್ಲಾಸ್ಟಿಕ್‌ ಬಳಕೆ ಮಾಡುತ್ತಿದ್ದ ವರ್ತಕರಿಗೆ ಪುರಸಭೆ ಅಧಿಕಾರಿಗಳು ದಂಡ ವಿಧಿಸಿದರು.

Advertisement

ಗುರುವಾರದ ಸಂತೆಗೆ ವಿವಿಧೆಡೆಯಿಂದ ಆಗಮಿಸಿ ವ್ಯಾಪಾರದಲ್ಲಿ ತೊಡಗಿದ್ದ ತರಕಾರಿ, ಹಣ್ಣು, ಹೂ, ಬಟ್ಟೆ, ತೆಂಗು, ಭಜ್ಜಿ, ಜಿಲೇಬಿ, ಮಕ್ಕಳ ಆಟಿಕೆ ವ್ಯಾಪಾರಿಗಳು ಸಾಮಾನ್ಯ ರೀತಿಯಲ್ಲಿ ಸಹಜವಾಗಿ ಪ್ಲಾಸ್ಟಿಕ್‌ ಕೈಚೀಲ ಹಾಗೂ ಕ್ಯಾರಿಬ್ಯಾಗ್‌ ಇಟ್ಟುಕೊಂಡು ಖರೀದಿಗೆ ಬಂದ ಗ್ರಾಹಕರಿಗೆ ನೀಡುತ್ತಿದ್ದರು. ಈ ವೇಳೆ ಮಾರುಕಟ್ಟೆ ಪ್ರವೇಶಿಸಿದ ಪುರಸಭೆ ಮುಖ್ಯಾಧಿಕಾರಿ ವಿಠ್ಠಲ ಹಾದಿಮನಿ, ಪರಿಸರ ಅಭಿಯಂತರ ಪೂಜಾ ಫುಲಾರೆ, ಹಿರಿಯ ಆರೋಗ್ಯ ನೈರ್ಮಲ್ಯ ನಿರೀಕ್ಷಕಿ ಲತಾಮಣಿ ಎಲ್‌, ಕಿರಿಯ ನಿರೀಕ್ಷಕ ಬಸವರಾಜ ಪೂಜಾರಿ, ವ್ಯವಸ್ಥಾಪಕ ಮಲ್ಲಿಕಾರ್ಜುನ ಹಾರಕೂಡ, ವಿಶ್ವನಾಥ ಭಾಗೋಡಿ, ಶ್ರೀಮಂತ ಧುಮ್ಮನಸೂರ ನೇತೃತ್ವದ ತಂಡ ಪ್ಲಾಸ್ಟಿಕ್‌ ಶೋಧ ನಡೆಸಿತು.

ನಿಷೇಧಕ್ಕೊಳಪಟ್ಟ ಪ್ಲಾಸ್ಟಿಕ್‌ ಬಳಕೆಯಲ್ಲಿ ತೊಡಗಿದ ವ್ಯಾಪಾರಿಗಳಿಗೆ ದಂಡ ವಿಧಿಸುವ ಮೂಲಕ ಕಾನೂನಿನ ಬಿಸಿ ಮುಟ್ಟಿಸಿತು. ಈ ವೇಳೆ ವ್ಯಾಪಾರಿಗಳಿಗೆ ಎಚ್ಚರಿಕೆ ನೀಡಿದ ಮುಖ್ಯಾಧಿಕಾರಿ ವಿಠ್ಠಲ ಹಾದಿಮನಿ, ಪ್ಲಾಸ್ಟಿಕ್‌ ಬಳಕೆ ಸಂಪೂರ್ಣ ನಿಷೇಧಿಸಲಾಗಿದೆ. ಈ ಕುರಿತು ಸರ್ಕಾರ ಆದೇಶ ಹೊರಡಿಸಿದೆ. ವಿಷಕಾರಿಯುಕ್ತ ತ್ಯಾಜ್ಯ ಪ್ಲಾಸ್ಟಿಕ್‌ನ್ನು ಯಾವುದೇ ಕಾರಣಕ್ಕೂ ಬಳಕೆ ಮಾಡಬಾರದು. ಮಾಡಿದರೇ ವ್ಯಾಪಾರಿಗಳು ದಂಡ ತೆತ್ತುವ ಜತೆಗೆ ಶಿಕ್ಷೆಗೂ ಗುರಿಯಾಗಬೇಕಾಗುತ್ತದೆ ಎಂದ ಎಚ್ಚರಿಸಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next