Advertisement
ಪ್ಲಾಸ್ಟಿಕ್ ಮುಕ್ತ ಭಾರತಕ್ಕಾಗಿ ಸರ್ಕಾರಗಳು ಕಾರ್ಯಾ ಚರಣೆ ನಡೆಸಿ, ಅರಿವು ಮೂಡಿಸುತ್ತಿದ್ದರೂ ಪ್ಲಾಸ್ಟಿಕ್ ಬಳಕೆ ಎಗ್ಗಿಲ್ಲದೆ ರಾಜಾರೋಷವಾಗಿ ನಡೆಯುತ್ತಿದೆ. ಜಿಲ್ಲಾಧಿಕಾರಿಗಳ ಆದೇಶದಂತೆ ರಾಮನಗರ ಜಿಲ್ಲೆ ಯಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧಿಸಲಾಗಿದೆ. ಆದರೆ, ಅಧಿಕಾರಿಗಳು ಕೇವಲ ಕಾಟಾಚಾರಕ್ಕಾಗಿ ರಾಮನಗರ, ಚನ್ನಪಟ್ಟಣದಲ್ಲಿ ಮಾತ್ರ ದಾಳಿ ನಡೆಸಿ, ಪ್ಲಾಸ್ಟಿಕ್ಗಳನ್ನು ವಶಪಡಿಸಿಕೊಳ್ಳುತ್ತಿದ್ದಾರೆ. ಆದರೆ, ಮಾಗಡಿ, ಕುದೂರು ಸುತ್ತಮುತ್ತ ರಾಜಾರೋಷವಾಗಿ ಪ್ಲಾಸ್ಟಿಕ್ ಕವರ್ ಗಳನ್ನು ಬಳಸುತ್ತಿದ್ದಾರೆ. ಈ ಭಾಗದವರು ಅಧಿಕಾರಿ ಗಳಿಗೆ ಮಂತ್ಲಿ ಕೊಟ್ಟು ಬುಕ್ ಮಾಡಿಕೊಂಡಿದ್ದಾರೆಯೂ ಏನೋ ಗೊತ್ತಿಲ್ಲ. ಆದರೆ, ಇದುವರೆವಿಗೂ ಅಧಿಕಾರಿ ಗಳು ಇಲ್ಲಿಗೆ ಬಂದು ಒಂದು ಬಾರಿಯೂ ದಾಳಿ ಮಾಡಿದ ಉದಾಹರಣೆಯಿಲ್ಲ. ಅಧಿಕಾರಿಗಳು ಮಾಗಡಿ ತಾಲೂಕಿನಲ್ಲಿ ಪ್ಲಾಸ್ಟಿಕ್ ಪಡಿಸಿಕೊಳ್ಳಲು ವಿಫಲರಾಗಿದ್ದಾರೆ.
Related Articles
Advertisement
ಒಟ್ಟಾರೆಯಾಗಿ ಪ್ಲಾಸ್ಟಿಕ್ ಬಳಕೆಯಿಂದ ಮಾನವನ ದೇಹ, ಪರಿಸರ, ಪ್ರಾಣಿ, ಪಕ್ಷಿಗಳ ಜೀವಕ್ಕೆ ಹಾನಿಯುಂಟು ಮಾಡುವುದರಲ್ಲಿ ನಾವು ಪ್ರಮುಖ ಪಾತ್ರ ವಹಿಸಿದ್ದೇವೆ. ಇನ್ನಾದರೂ ಎಚ್ಚೆತ್ತುಕೊಂಡು ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡಲು ಪರ್ಯಾಯವಾಗಿ ಸಿಗುವ ವಸ್ತುಗಳನ್ನು ಬಳಸಿ, ಮಾನವನ, ಪ್ರಾಣಿ, ಪಕ್ಷಿಗಳ ಆರೋಗ್ಯ ಹಾಗೂ ಪರಿಸರವನ್ನು ಉಳಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ.
ಪರಿಣಾಮಕಾರಿ ಅನುಷ್ಠಾನಗೊಳಿಸಿಲ್ಲ : ಜಿಲ್ಲೆಯಲ್ಲಿ ಯಾವುದೇ ನಗರ ಸ್ಥಳೀಯ ಸಂಸ್ಥೆ ಗಳು ಇದನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಗೊಳಿಸಿಲ್ಲ. ಈ ಕಾಯ್ದೆ ಅನುಷ್ಠಾನಗೊಳಿಸಲು ಐದಾರು ಇಲಾಖೆಗಳು ಜಂಟಿಯಾಗಿ ಕಾರ್ಯ ನಿರ್ವಹಿಸಬೇಕು. ಇದರಲ್ಲಿ ಸ್ಥಳೀಯ ಸಂಸ್ಥೆ ಪಾತ್ರ ಮಹತ್ವದಾಗಿದೆ. ಈ ಕುರಿತು ಸರಿಯಾಗಿ ಸಭೆ ನಡೆಯುತ್ತಿಲ್ಲ. ಹೀಗಾಗಿ ನಿಷೇಧ ಎನ್ನುವುದು ಬರೀ ಕಡತಕ್ಕೆ ಸೀಮಿತವಾಗಿದೆ ಎಂಬುದರಲ್ಲಿ ಸಂಶಯವಿಲ್ಲ. ಮನೆಯಲ್ಲಿ ಉಳಿದ ಆಹಾರ ಪದಾರ್ಥಗಳನ್ನು ಪ್ಲಾಸ್ಟಿಕ್ ಕವರ್ಗಳಲ್ಲಿ ತುಂಬಿ ಎಲ್ಲೆಂದರಲ್ಲಿ ಎಸೆಯುವ ಪರಿಣಾಮ, ಆ ಚೀಲ ಗಳಲ್ಲಿ ಇರುವ ಆಹಾರವನ್ನು ತಿನ್ನಲು ಬಯಸುವ ಪ್ರಾಣಿ, ಪಕ್ಷಿಗಳು ಆಹಾರವನ್ನು ಪ್ಲಾಸ್ಟಿಕ್ ಸಮೇತ ನುಂಗಿ ತಮ್ಮ ಪ್ರಾಣವನ್ನು ಕಳೆದುಕೊಳ್ಳುತ್ತಿವೆ.
ಪ್ಲಾಸ್ಟಿಕ್ ಬಳಕೆಯನ್ನು ಸರ್ಕಾರ ನಿಷೇಧ ಮಾಡಲಾಗಿದೆ. ಆದರೆ, ಸಾಮಾನ್ಯರು ಬಳಸುತ್ತಿದ್ದಾರೆ. ಪ್ರತಿಯೊಂದು ಅಂಗಡಿಗಳಲ್ಲೂ ಕವರ್ ಬಳಸುತ್ತಿದ್ದಾರೆ. ಇದುವರಿಗೂ ಜಿಲ್ಲೆಯಿಂದ ಬಂದು ಅಂಗಡಿ ಮೇಲೆ ದಾಳಿ ಮಾಡಿದ ಉದಾ ಹರಣೆಯಿಲ್ಲ. ಇನ್ನಾದರೂ ಜಿಲ್ಲಾಧಿಕಾರಿ ಯವರು ಮನಸ್ಸು ಮಾಡಿ, ಪ್ಲಾಸ್ಟಿಕ್ ಬಳಕೆ ನಿಷೇಧಿಸುತ್ತಾರಾ ಕಾದು ನೋಡೋಣ. – ಪದ್ಮನಾಬ್, ಕುದೂರು ಹೋಬಳಿ ಅಧ್ಯಕ್ಷ, ಕಸಾಪ
ಪ್ಲಾಸ್ಟಿಕ್ ನಿಷೇಧಿಸುವಂತೆ ಅಧಿಕಾರಿ ಗಳು ಹೇಳುತ್ತಾರೆ. ಆದರೆ, ಬಟ್ಟೆ ಚೀಲಕ್ಕೆ 5 ರೂ. ಕೈಯಿಂದ ನೀಡಬೇಕು. ಮಾರುಕಟ್ಟೆಗೆ ಬರುವವರು ಬರೀ ಕೈಯಲ್ಲಿಯೇ ಬರುತ್ತಾರೆ. ಕವರ್ ನೀಡದೆ ಹೋದರೆ ವಸ್ತುಗಳನ್ನು ಖರೀದಿಸದೆ, ಹಾಗೆಯೇ ಬೇರೆ ಅಂಗಡಿಗಳಿಗೆ ತೆರಳುತ್ತಾರೆ. -ಪ್ರಕಾಶ್, ವ್ಯಾಪಾರಿ
ಈಗಾಗಲೆ ಹಿಂದೆ ಸಭೆಯಲ್ಲಿ ಚರ್ಚಿಸಿ, ಕುದೂರು ವ್ಯಾಪ್ತಿಯ ಎಲ್ಲ ಅಂಗಡಿ ಗಳಿಗೂ 1 ತಿಂಗಳು ಕಾಲಾವಕಾಶ ನೀಡಿ, ಕ್ಯಾರಿ ಬ್ಯಾಗ್ ಮತ್ತು ಕವರ್ಗಳನ್ನು ವಶ ಪಡಿಸಿಕೊಂಡಿದ್ದೇವು. ಮತ್ತೆ ವರ್ತಕರು ಕವರ್ ಮಾರಾಟ ಮಾಡುತ್ತಿದ್ದಾರೆ. ಅಂಗಡಿ ಮೇಲೆ ದಾಳಿ ಮಾಡಿ, ಪ್ಲಾಸ್ಟಿಕ್ ವಶಪಡಿಸಿ ಕೊಂಡು ದಂಡ ವಿಧಿಸಲಾಗುವುದು. – ಲೋಕೇಶ್, ಪಿಡಿಒ, ಕುದೂರು
– ಕೆ.ಎಸ್.ಮಂಜುನಾಥ್