Advertisement

Supreme Court ಶಾಹಿ ಈದ್ಗಾ ಮಸೀದಿಯ ಸರ್ವೇ ಕೋರಿ ಅರ್ಜಿ

12:36 AM Aug 15, 2023 | Team Udayavani |

ಹೊಸದಿಲ್ಲಿ: ಈಗಾಗಲೇ ಇದ್ದ ಹಿಂದೂ ದೇಗುಲದ ಮೇಲೆ ಮಸೀದಿ ನಿರ್ಮಿಸಲಾಗಿ ದೆಯೇ ಎಂಬುದನ್ನು ಪತ್ತೆಹಚ್ಚಲು ಮಥು ರೆಯ ಶ್ರೀ ಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ಮಸೀದಿಯ ಆವರಣದ ವೈಜ್ಞಾನಿಕ ಸಮೀಕ್ಷೆ ನಡೆಸಬೇಕು ಎಂದು ಕೋರಿ “ಶ್ರೀ ಕೃಷ್ಣ ಜನ್ಮಭೂಮಿ ಮುಕ್ತಿ ನಿರ್ಮಾಣ್‌ ಟ್ರಸ್ಟ್‌’ ಸುಪ್ರೀಂ ಕೋರ್ಟ್‌ ಮೊರೆ ಹೋಗಿದೆ.

Advertisement

ಮೊಕದ್ದಮೆಯ ವಿರುದ್ಧ ಎತ್ತಿರುವ ಆಕ್ಷೇಪಣೆಗಳನ್ನು ನಿರ್ಧರಿಸುವ ಮೊದಲು ಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ಮಸೀದಿ ಆವರಣದ ವೈಜ್ಞಾನಿಕ ಸಮೀಕ್ಷೆಗೆ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸುವಂತೆ ಮಥುರಾ ಸಿವಿಲ್‌ ನ್ಯಾಯಾಧೀಶರಿಗೆ ನಿರ್ದೇಶನ ನೀಡಬೇಕೆಂಬ ತನ್ನ ಮನವಿಯನ್ನು ವಜಾಗೊಳಿಸಿದ ಅಲಹಾಬಾದ್‌ ಹೈಕೋರ್ಟ್‌ ನ ಆದೇಶವನ್ನು ಪ್ರಶ್ನಿಸಿ ಟ್ರಸ್ಟ್‌ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ.

 

Advertisement

Udayavani is now on Telegram. Click here to join our channel and stay updated with the latest news.

Next