Advertisement

ಕೊಳವೆ ಬಾವಿ ಬಗ್ಗೆ ಮಾಹಿತಿ ನೀಡಿ

06:22 AM Jun 25, 2020 | Lakshmi GovindaRaj |

ಚಿಕ್ಕಬಳ್ಳಾಪುರ: ಕೇಂದ್ರ ಸರ್ಕಾರದ ಜಲ ಸಂಪನ್ಮೂಲ ಇಲಾಖೆಯ ಸಣ್ಣ ನೀರಾವರಿ ಅಂಕಿ ಅಂಶಗಳ ಸಮನ್ವಯೀಕರಣ ಯೋಜನೆಯಡಿ ಪ್ರತಿ 5 ವರ್ಷಗಳಿಗೊಮ್ಮೆ ಸಣ್ಣ ನೀರಾವರಿ ಗಣತಿಯನ್ನು ಜಿಲ್ಲಾದ್ಯಂತ ಕೈಗೊಳ್ಳಲಾಗುತ್ತಿದ್ದು  ಸಾರ್ವಜನಿಕರು ಹಾಗೂ ರೈತರು ಕೊಳವೆ ಬಾವಿಗಳು, ಅಗೆದ ಬಾವಿಗಳ ಬಗ್ಗೆ ಅಧಿಕಾರಿಗಳಿಗೆ ಸಮರ್ಪಕವಾಗಿ ಮಾಹಿತಿ ನೀಡಿ ಸಹಕರಿಸಬೇಕು ಜಿಲ್ಲಾಧಿಕಾರಿ ಆರ್‌.ಲತಾ ತಿಳಿಸಿದರು.

Advertisement

ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ 6ನೇ ಸಣ್ಣ ನೀರಾವರಿ ಗಣತಿ ಪೂರ್ವ ಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಗಣತಿ ವೇಳೆ ಅಧಿಕಾರಿಗಳು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು, ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ಗಣತಿ ಮಾಡಲು ಆಯಾ  ತಾಲೂಕು ಕೇಂದ್ರಗಳಲ್ಲಿ ತರಬೇತಿ ನೀಡಲು ಕ್ರಮ ಕೈಗೊಳ್ಳಬೇಕೆಂದರು.

ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಶಿವಕುಮಾರ್‌, ಗಣತಿದಾರರು ಗ್ರಾಮ ಲೆಕ್ಕಾಧಿಕಾರಿಗಳು ರೈತರೊಂದಿಗೆ ವೈಯಕ್ತಿಕ ವಿಚಾರಣೆ, ಯೋಜನಾ ಸ್ಥಳಕ್ಕೆ ಭೇಟಿ  ನೀಡಿ ಭೌತಿಕ ಪರಿಶೀಲನೆ ನಡೆಸುವುದರೊಂದಿಗೆ ಪತ್ರಗಳಲ್ಲಿ ಮಾಹಿತಿ ಸಂಗ್ರಹಿಸಲಾಗುತ್ತದೆ. ಈ ಗಣತಿಯಲ್ಲಿ ಸಂಗ್ರಹಿಸಲಾದ ಮಾಹಿತಿಯಿಂದ ಅಂತರ್ಜಲ ಪ್ರಮಾಣ ಅಂದಾಜಿಸಬಹುದಾಗಿದೆ ಎಂದರು. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ  ಜಿ.ಕೆ ಮಿಥುನ್‌ ಕುಮಾರ್‌, ತಹಶೀಲ್ದಾರ್‌ಗಳಾದ ನಾಗ ಪ್ರಶಾಂತ್‌, ಅರುಂಧತಿ ಚಿಕ್ಕಬಳ್ಳಾಪುರ ನಗರಸಭೆ ಆಯುಕ್ತರಾದ ಲೋಹಿತ್‌ ಕುಮಾರ್‌ ಮತ್ತಿತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next