Advertisement

ನಕಲಿ ದಾಖಲೆ ಸೃಷ್ಟಿಸಿ ನಿವೇಶನ ಮಾರಾಟ

12:30 PM Mar 28, 2017 | |

ಬೆಂಗಳೂರು: ಆಯುಕ್ತರು ಮತ್ತು ಕಾರ್ಯದರ್ಶಿಗಳ ನಕಲಿ ಸಹಿ ಮತ್ತು ನಕಲಿ ದಾಖಲೆಗಳನ್ನು ಸೃಷ್ಟಿಸಿ ಖಾಲಿ ನಿವೇಶನಗಳನ್ನು ಮಾರಾಟ ಮಾಡುತ್ತಿದ್ದ ಇಬ್ಬರು ಬಿಡಿಎ ಕೇಸ್‌ ವರ್ಕರ್‌ಗಳನ್ನು ಶೇಷಾದ್ರಿಪುರಂ ಪೊಲೀಸರು ಸೋಮವಾರ ರಾತ್ರಿ ಬಂಧಿಸಿದ್ದಾರೆ.

Advertisement

ರವಿ ಕುಮಾರ್‌ ಮತ್ತು ತಿಪ್ಪೇಸ್ವಾಮಿ ಬಂತರು. ಬಿಡಿಎನಲ್ಲಿ ಕೇಸ್‌ ವರ್ಕರ್‌ಗಳಾಗಿರುವ ಆರೋಪಿಗಳು, ಕೆಲ ವರ್ಷಗಳಿಂದ ಆಯುಕ್ತರು ಮತ್ತು ಕಾರ್ಯದರ್ಶಿಗಳ ನಕಲಿ ಸಹಿ ಬಳಸಿ ನಗರದ ಪ್ರಮುಖ ಬಡಾವಣೆಗಳ ಖಾಲಿ ನಿವೇಶನಗಳನ್ನು ಮಾರಾಟ ಮಾಡುತ್ತಿದ್ದರು.

ಈ ಬಗ್ಗೆ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಬಂದಿದ್ದವು. ಈ ಹಿನ್ನೆಲೆಯಲ್ಲಿ ಬಿಡಿಎ ಆಯುಕ್ತರು ಆತಂರಿಕ ತನಿಖೆ ನಡೆಸುವಂತೆ ಸೂಚಿಸಿದ್ದು, ಈ ವೇಳೆ ಆರೋಪಿಗಳ ಕೃತ್ಯ ಬಯಲಾಗಿದೆ. ಇದುವರೆಗೂ ಆರೋಪಿಗಳು ಸುಮಾರು 32ಕ್ಕೂ ಅಕ ಖಾಲಿ ನಿವೇಶನಗಳನ್ನು ಮಾರಾಟ ಮಾಡಿರುವುದು ಬೆಳಕಿಗೆ ಬಂದಿದೆ ಎಂದು ಬಿಡಿಎ ಮೂಲಗಳು ತಿಳಿಸಿವೆ.

ಆರೋಪಿಗಳ ವಿರುದ್ಧ ಕಾರ್ಯದರ್ಶಿ ಸತೀಶ್‌ ಬಾಬು ಎಂಬುವರು ದೂರು ನೀಡಿದ್ದು, ಈ ಮೇರೆಗೆ ಎಫ್ಐಆರ್‌ ದಾಖಲಿಸಲಾಗಿದೆ. ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು, ಮಂಗಳವಾರ ಬೆಳಗ್ಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
 

Advertisement

Udayavani is now on Telegram. Click here to join our channel and stay updated with the latest news.

Next