Advertisement

29 ಬಲಿ ಪಡೆದ ಉ.ಪ್ರ. ಬಸ್‌ ಅವಘಡ: ಪ್ರಧಾನಿ ಮೋದಿ ಶೋಕ, ಸಂತಾಪ

09:59 AM Jul 09, 2019 | Sathish malya |

ಹೊಸದಿಲ್ಲಿ: ಉತ್ತರ ಪ್ರದೇಶದಲ್ಲಿ ಸಂಭವಿಸಿರುವ ಭೀಕರ ರಸ್ತೆ ಅವಘಡದಲ್ಲಿ 29 ಮಂದಿ ಮೃತಪಟ್ಟಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಆಘಾತ, ಶೋಕ ವ್ಯಕ್ತಪಡಿಸಿದ್ದಾರೆ.

Advertisement

ಉತ್ತರ ಪ್ರದೇಶ ರಾಜ್ಯ ಸಾರಿಗೆ ಬಸ್ಸು ಆರು ಪಥಗಳ ಯಮುನಾ ಎಕ್ಸ್‌ಪ್ರೆಸ್‌ವೇ ಯಿಂದ ಸ್ಕಿಡ್‌ ಆಗಿ 50 ಅಡಿ ಆಳದ ನಾಲೆಗೆ ಉರುಳಿ ಬಿದ್ದ ಭೀಕರ ಅವಘಡದಲ್ಲಿ 29 ಮಂದಿ ಪ್ರಯಾಣಿಕರು ಮೃತಪಟ್ಟಿದ್ದಾರೆ.

“ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿರುವ ಈ ಭೀಕರ ಅವಘಡದಿಂದ ದುಃಖವಾಗಿದೆ. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು; ಗಾಯಗೊಂಡವರು ಬೇಗನೆ ಗುಣಮುಖರಾಗಲೆಂದು ಹಾರೈಸುತ್ತೇನೆ. ರಾಜ್ಯ ಸರಕಾರ ಮತ್ತು ಸ್ಥಳೀಯಾಡಳಿತೆ ಅಗತ್ಯವಿರುವ ಎಲ್ಲ ನೆರವು ನೀಡುತ್ತಿದೆ’ ಎಂದು ಪ್ರಧಾನಿ ಮೋದಿ ಟ್ವಿಟರ್‌ನಲ್ಲಿ ಹೇಳಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next