Advertisement

Kanniyakumari; 45 ಗಂಟೆಗಳ ಧ್ಯಾನವನ್ನು ಪ್ರಾರಂಭಿಸಿದ ಪ್ರಧಾನಿ ಮೋದಿ

09:57 PM May 30, 2024 | Team Udayavani |

ಕನ್ಯಾಕುಮಾರಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗುರುವಾರ ತಮಿಳುನಾಡಿನ ಕನ್ಯಾಕುಮಾರಿಯಲ್ಲಿರುವ ಐತಿಹಾಸಿಕ ಸ್ವಾಮಿ ವಿವೇಕಾನಂದ ಸ್ಮಾರಕದಲ್ಲಿ 45 ಗಂಟೆಗಳ ಧ್ಯಾನವನ್ನು ಪ್ರಾರಂಭಿಸಿದ್ದಾರೆ.

Advertisement

ಭಾರತದ ದಕ್ಷಿಣದ ತುದಿಯಲ್ಲಿ ಪ್ರಧಾನಿ ಮೋದಿಯವರ ಧ್ಯಾನವು ಗುರುವಾರ ಸಂಜೆ 6.45 ರ ಸುಮಾರಿಗೆ ಪ್ರಾರಂಭವಾಯಿತು. ಧ್ಯಾನದ ಅವಧಿಯಲ್ಲಿ, ಪ್ರಧಾನಮಂತ್ರಿ ಅವರು ಕೇವಲ ದ್ರವ ಆಹಾರ ಮಾತ್ರ ಸೇವಿಸುತ್ತಾರೆ. ಎಳನೀರು, ದ್ರಾಕ್ಷಿ ರಸ ಮತ್ತು ಇತರ ದ್ರವಗಳನ್ನು ಸೇವಿಸುತ್ತಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಪ್ರಧಾನಮಂತ್ರಿಯವರುಧ್ಯಾನದ ಅವಧಿಯಲ್ಲಿ ಮೌನವಾಗಿದ್ದು ಧ್ಯಾನ ಮಂದಿರದಿಂದ ಹೊರಗೆ ಬರುವುದಿಲ್ಲ. ಲೋಕಸಭಾ ಚುನಾವಣೆಯ ಎಡೆಬಿಡದ ಪ್ರಚಾರ ಅಂತ್ಯವಾದ ಬಳಿಕ ಪ್ರಧಾನಿ ಮೋದಿ ಅವರು ಆಧ್ಯಾತ್ಮಿಕ ಧ್ಯಾನ ನಡೆಸುತ್ತಿದ್ದಾರೆ.

131 ವರ್ಷಗಳ ಹಿಂದೆ ಆಧ್ಯಾತ್ಮಿಕ ನಾಯಕ ಸ್ವಾಮಿ ವಿವೇಕಾನಂದರು ಧ್ಯಾನ ಮಾಡಿದ ಸ್ಥಳದಲ್ಲಿ ಅವರು 45 ಗಂಟೆಗಳ ಕಾಲ ಧ್ಯಾನ ಮಾಡುತ್ತಿರುವುದು ವಿಶೇಷವಾಗಿದೆ. ಪ್ರಧಾನಿ ಇರುವ ಸ್ಥಳದ ಸುತ್ತ ವ್ಯಾಪಕ ಕಟ್ಟೆಚ್ಚರ ವಹಿಸಲಾಗಿದೆ.

ಕಪ್ಪು ಬಾವುಟ
ನರೇಂದ್ರ ಮೋದಿಯವರ ಕನ್ಯಾಕುಮಾರಿ ಭೇಟಿಯನ್ನು ವಿರೋಧಿಸಿ ತಿರುನಲ್ವೇಲಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಶಂಕರಪಾಂಡಿಯನ್ ಅವರು ಗುರುವಾರ ತಿರುನಲ್ವೇಲಿಯ ಕೊಕ್ಕಿರಕುಲಂನಲ್ಲಿರುವ ಪಕ್ಷದ ಕಚೇರಿಯ ಮೇಲೆ ಕಾರ್ಯಕರ್ತರೊಂದಿಗೆ ಕಪ್ಪು ಬಾವುಟಗಳನ್ನು ಹಾರಿಸಿ ಆಕ್ರೋಶ ಹೊರ ಹಾಕಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next