Advertisement

ನೇರ ನಗದು ವರ್ಗಾವಣೆಯಲ್ಲಿ ಮೊದಲ ಸ್ಥಾನ : ರಾಜ್ಯ ಕೃಷಿ ಇಲಾಖೆಗೆ ಪಿಎಂ ಕಿಸಾನ್‌ ಪ್ರಶಸ್ತಿ

01:28 AM Feb 25, 2021 | Team Udayavani |

ಬೆಂಗಳೂರು: ಪಿಎಂ ಕಿಸಾನ್‌ ಯೋಜನೆಯಡಿ ರೈತರ ಬ್ಯಾಂಕ್‌ ಖಾತೆಗಳಿಗೆ ಶೇ. 97 ಆಧಾರ್‌ ಕಾರ್ಡ್‌ ಜೋಡಣೆಯ ಮೂಲಕ ನೇರ ನಗದು ವರ್ಗಾವಣೆ ಮಾಡುವಲ್ಲಿ ಮೊದಲ ಸ್ಥಾನ ಪಡೆದಿರುವುದಕ್ಕಾಗಿ ರಾಜ್ಯ ಕೃಷಿ ಇಲಾಖೆಗೆ ಕೇಂದ್ರ ಸರಕಾರವು ಪ್ರಶಸ್ತಿ ನೀಡಿದೆ.

Advertisement

ಹೊಸದಿಲ್ಲಿಯಲ್ಲಿ ನಡೆದ ಪಿಎಂ ಕಿಸಾನ್‌ ಯೋಜನೆಯ 2ನೇ ವರ್ಷಾಚರಣೆ ಕಾರ್ಯಕ್ರಮದಲ್ಲಿ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್‌ ತೋಮರ್‌ ಅವರು ಕೃಷಿ ಸಚಿವ ಬಿ.ಸಿ. ಪಾಟೀಲ್‌ ಮತ್ತು ಇಲಾಖೆಯ ಅಧಿಕಾರಿಗಳಿಗೆ ಪ್ರಶಸ್ತಿ ಪ್ರದಾನ ಮಾಡಿದರು.

ಇತ್ತೀಚೆಗೆ ಕರ್ನಾಟಕದಲ್ಲಿ ಮೊಬೈಲ್‌ ಬೆಳೆ ಸಮೀಕ್ಷೆಯೂ ಯಶಸ್ವಿಯಾಗಿದ್ದು, ಕೇಂದ್ರದಿಂದ ಮೆಚ್ಚುಗೆ ಪಡೆದಿದೆ. ಕೃಷಿಸಂಜೀವಿನಿ ಯೋಜನೆಯ ಜಾರಿಯೂ ಶ್ಲಾಘನೆ ಪಡೆದಿದ್ದು, ಕರ್ನಾಟಕದ ಕೃಷಿ ಇಲಾಖೆಯಲ್ಲಿ ತಂತ್ರಜ್ಞಾನ ಅಳವಡಿಕೆ ಮತ್ತು ರೈತರಿಗೆ ಹೊಸ ಹೊಸ ಯೋಜನೆಗಳನ್ನು ಪರಿಚಯಿಸುತ್ತಿರುವುದಕ್ಕೆ ಸಚಿವ ಬಿ.ಸಿ. ಪಾಟೀಲ್‌ ಅವರನ್ನು ಕೇಂದ್ರ ಶ್ಲಾಘಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next