Advertisement

ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ 12ನೇ ಕಂತಿನ ಆರ್ಥಿಕ ನೆರವು ಬಿಡುಗಡೆ

08:35 PM Oct 17, 2022 | Team Udayavani |

ಬೆಂಗಳೂರು: ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯ 12ನೇ ಕಂತಿನ ನೆರವು ಬಿಡುಗಡೆ ಮಾಡಿದ್ದು, ರಾಜ್ಯದ 50.36 ಲಕ್ಷ ರೈತರಿಗೆ 1,007.26 ಕೋ. ರೂ. ಗಳನ್ನು ವರ್ಗಾಯಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

Advertisement

ಇದುವರೆಗೆ ಕೇಂದ್ರ ಸರಕಾರದಿಂದ 53.83 ಲಕ್ಷ ರೈತ ಕುಟುಂಬಗಳು ಕನಿಷ್ಠ ಒಂದು ಕಂತು ಪಡೆಯುವ ಮೂಲಕ ಯೋಜನೆಯ ಲಾಭ ಪಡೆದಿರುತ್ತಾರೆ. ಮಾರ್ಚ್‌ 2019ರಿಂದ ಜುಲೈ 2022ರ ವರೆಗೆ 53.83 ಲಕ್ಷ ರೈತ ಕುಟುಂಬಗಳು ಕೇಂದ್ರ ಸರಕಾರದಿಂದ ಒಟ್ಟು 9,968.57 ಕೋಟಿ ರೂ. ಸಹಾಯಧನ ಪಡೆದಿದೆ.

2022-23ನೇ ಸಾಲಿನಲ್ಲಿ 1,251.98 ಕೋ. ರೂ.ಗಳ ಸಹಾಯಧನ ವರ್ಗಾವಣೆಯಾಗಿದೆ. ರಾಜ್ಯ ಸರಕಾರದಿಂದ ಪಿ.ಎಂ. ಕಿಸಾನ್‌  ಕರ್ನಾಟಕ ಯೋಜನೆಯಡಿ ಕೇಂದ್ರದಿಂದ ಅನುಮೋದಿಸಲ್ಪಟ್ಟ ರೈತ ಕುಟುಂಬಗಳಿಗೆ 2019ರಿಂದ ಇಲ್ಲಿಯವರೆಗೆ 4821.37 ಕೋ. ರೂ. ಆರ್ಥಿಕ ಸಹಾಯಧನ ನೀಡಲಾಗಿರುತ್ತದೆ. 2022-23ನೇ ಸಾಲಿನಲ್ಲಿ 956.71 ಕೋ. ರೂ. ಗಳ ಆರ್ಥಿಕ ನೆರವನ್ನು ರೈತರ ಬ್ಯಾಂಕ್‌ ಖಾತೆಗಳಿಗೆ ನೇರ ನಗದು ವರ್ಗಾವಣೆ ಮಂಜೂರಾತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next