Advertisement

ಮೇ.14 ರಂದು ದೇಶದ 9.5 ಕೋಟಿ ಫಲಾನುಭವಿಗಳಿಗೆ ಪಿಎಂ ಕಿಸಾನ್‌ ಯೋಜನೆಯ 8ನೇ ಕಂತು ವಿತರಣೆ

06:13 PM May 13, 2021 | Team Udayavani |

ನವದೆಹಲಿ: ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆ ಅಡಿಯಲ್ಲಿ ರೈತರಿಗೆ ನೀಡಬೇಕಾಗಿರುವ ಎಂಟನೇ ಕಂತಿನ ನೆರವನ್ನು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ವಿತರಿಸಲಿದ್ದಾರೆ.

Advertisement

ವಿಡಿಯೊ ಕಾನ್ಫರೆನ್ಸ್‌ ಮೂಲಕ ಈ ಕಾರ್ಯಕ್ರಮ ನಡೆಯಲಿದೆ. 9.5 ಕೋಟಿ ಮಂದಿ ಫ‌ಲಾನುಭವಿಗಳಿಗೆ 19 ಸಾವಿರ ಕೋಟಿ ರೂ. ಮೊತ್ತವನ್ನು ವಿತರಿಸಲಾಗುತ್ತದೆ.

ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್‌ ತೋಮರ್‌ ಈ ಸಂದರ್ಭದಲ್ಲಿ ಉಪಸ್ಥಿತರಿರಲಿದ್ದಾರೆ.

ಯೋಜನೆ ಅಡಿಯಲ್ಲಿ ರೈತರಿಗೆ ವಾರ್ಷಿಕವಾಗಿ 6 ಸಾವಿರ ರೂ. ನೀಡಲು ಉದ್ದೇಶಿಸಲಾಗಿದೆ. ಅದನ್ನು ಮೂರು ಸಮಾನ ಕಂತುಗಳ ಮೂಲಕ ರೈತರ ಬ್ಯಾಂಕ್‌ ಖಾತೆಗೆ ವರ್ಗಾಯಿಸಲಾಗುತ್ತದೆ.

ಇದನ್ನೂ ಓದಿ :ನಿರ್ಬಂಧಗಳು ಜಾರಿಯಾದ ಬಳಿಕ ಸೋಂಕು ಪ್ರಕರಣಗಳಲ್ಲಿ ಇಳಿಕೆ: ಸಿಎಂ ಯಡಿಯೂರಪ್ಪ

Advertisement
Advertisement

Udayavani is now on Telegram. Click here to join our channel and stay updated with the latest news.

Next