Advertisement

ಇಂದು ಪ್ರಧಾನಿ ನರೇಂದ್ರ ಮೋದಿಯವರಿಗೆ 70ನೇ ಹುಟ್ಟುಹಬ್ಬದ ಸಂಭ್ರಮ

02:10 AM Sep 17, 2020 | mahesh |

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿಯವರು ಸೆ.17ರಂದು 70ನೇ ಹುಟ್ಟುಹಬ್ಬ ಆಚರಿಸಿಕೊಳ್ಳಲಿದ್ದಾರೆ. ಆ ಪ್ರಯುಕ್ತ ಕೊಯಮತ್ತೂರಿನ ಬಿಜೆಪಿ ಕಾರ್ಯಕರ್ತರು ಬುಧವಾರ ಶಿವನ್‌ ಕಾಮಾಚಿ ಅಮ್ಮನ್‌ ದೇಗುಲದಲ್ಲಿ 70 ಕೆ.ಜಿ. ಲಡ್ಡುವನ್ನು ದೇವರಿಗೆ ನೈವೇದ್ಯದ ರೂಪದಲ್ಲಿ ಸಮರ್ಪಿಸಿದ್ದಾರೆ.

Advertisement

ಆನಂತರ, ಅದನ್ನು ಭಕ್ತಾದಿಗಳಿಗೆ ಪ್ರಸಾದದ ರೂಪದಲ್ಲಿ ವಿತರಿಸಲಾಗಿದೆ. ಲಡ್ಡು ವಿತರಣೆಗೂ ಮೊದಲು ದೇಗುಲದ ಬಳಿ ಮೆರವಣಿಗೆ ನಡೆಸಿದ ಕಾರ್ಯಕರ್ತರು, ಆನಂತರ ದೇಗುಲ ಪವೇಶಿಸಿ ಪ್ರಧಾನಿಯವರ ಶ್ರೇಯಸ್ಸಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಪ್ರಧಾನಿಯವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಕಳೆದೊಂದು ವಾರದಿಂದ ಸಾಮಾಜಿಕ ಸೇವೆಯಲ್ಲಿ ಬಿಜೆಪಿ ಕಾರ್ಯಕರ್ತರು ತೊಡಗಿಸಿಕೊಂಡಿದ್ದರು. ಬಡವರಿಗೆ ದಿನಸಿ ಹಂಚುವುದು, ರಕ್ತದಾನ ಶಿಬಿರ, ಕಣ್ಣಿನ ತಪಾಸಣೆ ಶಿಬಿರಗಳನ್ನು ಆಯೋಜಿಸುವುದು ಸೇರಿದಂತೆ ಹಲವಾರು ಜನೋಪಯೋಗಿ ಸೇವೆಗಳನ್ನು ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next