Advertisement

ರೈತರ ಬಗ್ಗೆ ಮೊಸಳೆ ಕಣ್ಣೀರು

10:11 AM Jul 16, 2018 | Team Udayavani |

ಮಿರ್ಜಾಪುರ: ರೈತರ ಕಲ್ಯಾಣದ ಬಗ್ಗೆ ಕಾಂಗ್ರೆಸ್‌ ಹಾಗೂ ಇತರ ಪಕ್ಷಗಳು ಬರೀ ಮೊಸಳೆ ಕಣ್ಣೀರು ಸುರಿಸುತ್ತಲೇ ಬಂದಿವೆ ಎಂದು ಪ್ರಧಾನಿ ಮೋದಿ ಟೀಕಿಸಿದ್ದಾರೆ. ಉತ್ತರ ಪ್ರದೇಶಕ್ಕೆ 2 ದಿನಗಳ ಪ್ರವಾಸ ಕೈಗೊಂಡಿರುವ ಮೋದಿ, ಭಾನುವಾರ ಹಲವು ಮಹತ್ವದ ಯೋಜನೆಗಳನ್ನು ಉದ್ಘಾಟಿಸಿದ್ದಾರೆ. ಮಿರ್ಜಾಪುರದಲ್ಲಿ ಬನ್ಸಾಗರ್‌ ನಾಲೆ ಯೋಜನೆ ಉದ್ಘಾಟಿಸಿ ಮಾತನಾಡಿದ್ದು, ಕಾಂಗ್ರೆಸ್‌ ವಿರುದ್ಧ ತೀವ್ರ ವಾಗ್ಧಾಳಿ ನಡೆಸಿದ್ದಾರೆ.

Advertisement

ರೈತರ ಹೆಸರಿನಲ್ಲಿ ಕಾಂಗ್ರೆಸ್‌ ರಾಜಕೀಯ ನಡೆಸುತ್ತಿದೆ. ಕನಿಷ್ಠ ಬೆಂಬಲ ಬೆಲೆ ಏರಿಸುವುದಕ್ಕೂ ಅವರ ಬಳಿ ಸಮಯವಿರಲಿಲ್ಲ. ನಾವು ಅದನ್ನು ಮಾಡಿದ್ದೇವೆ. ನಮ್ಮ ಸರಕಾರಗಳ ಪ್ರಯತ್ನದಿಂದಾಗಿ ರೈತರ ಆದಾಯ ದುಪ್ಪಟ್ಟಾಗುವ ದಿನ ದೂರವಿಲ್ಲ. ಕಾಂಗ್ರೆಸ್‌ ತನ್ನ ಅವಧಿಯಲ್ಲಿ ಹಲವು ನೀರಾವರಿ ಯೋಜನೆಗಳನ್ನು ಯಾಕೆ ಪೂರ್ಣಗೊಳಿಸಿಲ್ಲ ಎಂದು ಜನರು ಪ್ರಶ್ನಿಸಬೇಕು ಎಂದಿದ್ದಾರೆ. ಮಿರ್ಜಾಪುರ ವೈದ್ಯಕೀಯ ಕಾಲೇಜಿಗೆ ಶಂಕುಸ್ಥಾಪನೆ, 108 ಜನೌಷಧ ಕೇಂದ್ರಗಳು ಹಾಗೂ ಗಂಗಾ ನದಿಗೆ ಮಿರ್ಜಾಪುರ-ವಾರಾಣಸಿ ಸಂಪರ್ಕಿಸುವ ಸೇತುವೆ ಉದ್ಘಾಟನೆಯನ್ನೂ ಅವರು ನೆರವೇರಿಸಿದ್ದಾರೆ.

ಮೋದಿ ಮನಸ್ಥಿತಿ ರೋಗಗ್ರಸ್ಥ: ಕಾಂಗ್ರೆಸ್‌ ಮುಸ್ಲಿಂ ಪುರುಷರ ಪಕ್ಷ ಮಾತ್ರ ಎಂದು ಪ್ರಧಾನಿ ಮೋದಿ ಹೇಳಿಕೆ ನೀಡಿರುವುದು ಅದರ ಮನಸ್ಥಿತಿಯನ್ನು ತೋರಿಸುತ್ತದೆ ಎಂದು ಕಾಂಗ್ರೆಸ್‌ ಹೇಳಿದೆ.

Advertisement

Udayavani is now on Telegram. Click here to join our channel and stay updated with the latest news.

Next