Advertisement

Live Speech: ಕೋಟೆ ನಾಡಲ್ಲಿ ಪ್ರಧಾನಿ ನರೇಂದ್ರ ಮೋದಿ

09:04 AM Apr 10, 2019 | Nagendra Trasi |

ಚಿತ್ರದುರ್ಗ: ಲೋಕಸಭಾ ಚುನಾವಣಾ ಪ್ರಚಾರದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಮಧ್ಯಾಹ್ನ ಒನಕೆ ಒನಕೆ ಒಬವ್ವ ಸ್ಟೇಡಿಯಂಗೆ ಆಗಮಿಸಿದ್ದರು.

Advertisement

ನಂತರ ಬಿಗಿ ಪೊಲೀಸ್ ಭದ್ರತೆಯೊಂದಿಗೆ ಪ್ರಧಾನಿ ಮೋದಿ ಅವರು ಸಮಾವೇಶದ ಜಯದೇವ ಮುರುಘರಾಜೇಂದ್ರ ಸ್ಟೇಡಿಯಂ ಸ್ಥಳಕ್ಕೆ ಆಗಮಿಸಿದ್ದರು. ಬಿಜೆಪಿಯ ವಿಜಯ ಸಂಕಲ್ಪ ರಾಲಿಯಲ್ಲಿ ಬಿಜೆಪಿ ಮುಖಂಡರು ಚಳ್ಳಕೆರೆಯಲ್ಲಿ ತಯಾರಾಗುವ ಕಂಬಳಿ ಹೊದೆಸಿ ಸನ್ಮಾನಿಸಿದರು.

ಪ್ರಧಾನಿ ಮೋದಿ ಆಗಮಿಸುತ್ತಿದ್ದಂತೆಯೇ ನೆರೆದ ಜನಸಾಗರ ಮೋದಿ, ಮೋದಿ ಎಂದು ಘೋಷಣೆ ಕೂಗಿದರು. ಆರಂಭಿಕವಾಗಿ ಕನ್ನಡದಲ್ಲಿ ಭಾಷಣ ಆರಂಭಿಸಿದ ಅವರು, ನಿಮ್ಮ ಚೌಕಿದಾರ್ ನರೇಂದ್ರ ಮೋದಿಯ ನಮಸ್ಕಾರಗಳು. ಶತಾಯುಷಿ ಸಿದ್ದಗಂಗಾಶ್ರೀಗಳಿಗೆ ತಲೆಬಾಗಿ ನಮಸ್ಕರಿಸುತ್ತೇನೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next