Advertisement

ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ, ಐಎಎಫ್ ಹೆಲಿಕಾಪ್ಟರ್ ಮೂಲಕ ತುಮಕೂರಿಗೆ

09:49 AM Jan 03, 2020 | Nagendra Trasi |

ಬೆಂಗಳೂರು: ದೆಹಲಿಯಿಂದ ವಿಶೇಷ ವಿಮಾನದಲ್ಲಿ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರನ ಯಲಹಂಕ ಏರ್ ಬೇಸ್ ಗೆ ಆಗಮಿಸಿದ್ದು, ಇಲ್ಲಿಂದ ಐಎಎಫ್ ನ ಹೆಲಿಕಾಪ್ಟರ್ ಮೂಲಕ ತುಮಕೂರಿಗೆ ಪ್ರಯಾಣ ಬೆಳೆಸಿದ್ದಾರೆ.

Advertisement

ಯಲಹಂಕ ಏರ್ ಬೇಸ್ ಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೂಗುಚ್ಛ ನೀಡಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಕೇಂದ್ರ ಸಚಿವ ಡಿವಿ ಸದಾನಂದ ಗೌಡ, ಪ್ರಹ್ಲಾದ್ ಜೋಶಿ ಸೇರಿದಂತೆ ಹಲವು ಗಣ್ಯರು ಹಾಜರಿದ್ದರು.

ಮೊದಲನೇ ಹೆಲಿಕಾಪ್ಟರ್ ನಲ್ಲಿ ಪ್ರಧಾನಿ ಜತೆ ಸಿಎಂ ಬಿಎಸ್ ಯಡಿಯೂರಪ್ಪ ಪ್ರಯಾಣ. ಮೂರನೇ ಹೆಲಿಕಾಪ್ಟರ್ ನಲ್ಲಿ ಪ್ರಧಾನಿ ಕಚೇರಿಗಳ ಅಧಿಕಾರಿಗಳು ಪ್ರಯಾಣ ಬೆಳೆಸಿದ್ದಾರೆ.

ಪ್ರಧಾನಿ ಸೇನಾ ಹೆಲಿಕ್ಯಾಪ್ಟರ್ ನಲ್ಲಿ ತುಮಕೂರಿಗೆ ತೆರಳಿದ್ದು, ನಂತರ ಅಲ್ಲಿಂದ ರಸ್ತೆ ಮಾರ್ಗವಾಗಿ ಸಿದ್ದಗಂಗಾ ಮಠಕ್ಕೆ ತೆರಳಲಿದ್ದಾರೆ ಎಂದು ವರದಿ ತಿಳಿಸಿದೆ. ಬಯಲು ಸೀಮೆ ಪ್ರದೇಶವಾದರೂ ರಾಗಿ ಮತ್ತು ತೆಂಗು ಬೆಳೆಯಲ್ಲಿ ರಾಜ್ಯದಲ್ಲಿ ಮೊದಲ ಸ್ಥಾನದಲ್ಲಿರುವ ಕಲ್ಪತರು ನಾಡಿನಲ್ಲಿ ಪ್ರಗತಿಪರ ರೈತರಿಗೆ ರಾಷ್ಟ್ರಮಟ್ಟದ ಕೃಷಿ ಸಮ್ಮಾನ್ ಯೋಜನೆ ಅನುಷ್ಠಾನ ಮತ್ತು ಕೃಷಿ ಕರ್ಮಣ್ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಪ್ರಧಾನಿ ಮೋದಿ ಪಾಲ್ಗೊಳ್ಳಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next