Advertisement

ರಾಷ್ಟ್ರೀಯ ಏಕತಾ ದಿವಸ: ಸರ್ದಾರ್ ಪಟೇಲ್ ಪ್ರತಿಮೆಗೆ ಪುಷ್ಪಾರ್ಚನೆ ಸಲ್ಲಿಸಿದ ಪ್ರಧಾನಿ ಮೋದಿ

10:55 AM Oct 31, 2020 | keerthan |

ವಡೋದರ: ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನವಾದ ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಸರ್ದಾರ್ ಪಟೇಲರ ಪ್ರತಿಮೆಗೆ ಪುಷ್ಪಾರ್ಚನೆ ಸಲ್ಲಿಸಿ ನಮಿಸಿದರು.

Advertisement

ಗುಜರಾತ್ ನ ಕೆವಾಡಿಯಾದಲ್ಲಿರುವ ಬೃಹತ್ ಏಕತಾ ಪ್ರತಿಮೆಗೆ ಪ್ರಧಾನಿ ಮೋದಿ ಪುಷ್ಪಾರ್ಚನೆ ಸಲ್ಲಿಸಿ ಸರ್ದಾರ್ ಪಟೇಲರಿಗೆ ನಮನ ಸಲ್ಲಿಸಿದರು. ನಂತರ ಕೇಂದ್ರ ಸಶಸ್ತ್ರ ಪಡೆ ಮತ್ತು ಗುಜರಾತ್ ಪೊಲೀಸ್ ಪರೇಡ್ ವೀಕ್ಷಣೆ ಮಾಡಿದರು.

ಪ್ರಧಾನಿ ಮೋದಿ ಗುಜರಾತ್ ಪ್ರವಾಸದಲ್ಲಿದ್ದು, ಶುಕ್ರವಾರ ಅಹಮದಾಬಾದ್ ಗೆ ಆಗಮಿಸಿದ್ದರು. ಕೆವಾಡಿಯಾದಲ್ಲಿ ಆರೋಗ್ಯ ವನ, ಏಕತಾ ಮಾಲ್, ಮಕ್ಕಳ ಪೌಷ್ಟಿಕ ಪಾರ್ಕ್, ಸರ್ದಾರ್ ಪಟೇಲ್ ಜಂಗಲ್ ಸಫಾರಿಯನ್ನು ನರೇಂದ್ರ ಮೋದಿಯವರು ಶುಕ್ರವಾರ ಉದ್ಘಾಟಿಸಿದ್ದರು.

 

Advertisement

Advertisement

Udayavani is now on Telegram. Click here to join our channel and stay updated with the latest news.

Next