Advertisement

ತಾಂಡಾ‌ ನಿವಾಸಿಗಳಿಗೆ ಐತಿಹಾಸಿಕ 52 ಸಾವಿರ ಜನರಿಗೆ ಹಕ್ಕು ಪತ್ರ ವಿತರಣೆ

04:31 PM Jan 19, 2023 | Team Udayavani |

ಕಲಬುರಗಿ: ತಾಂಡಾ ನಿವಾಸಿಗಳಿಗೆ ದೇಶದಲ್ಲಿಯೇ ಐತಿಹಾಸಿಕವಾಗಿ ಗುರುವಾರ ಜಿಲ್ಲೆಯ ಸೇಡಂ ತಾಲೂಕಿನ ಮಳಖೇಡದಲ್ಲಿ 5 ಜಿಲ್ಲೆಗಳ 342 ಗ್ರಾಮಗಳ 52,072 ತಾಂಡಾ ನಿವಾಸಿಗಳಿಗೆ ಪ್ರಧಾನಮಂತ್ರಿ ನರೇಂದ್ರ‌ ಮೋದಿ ಅವರು ಏಕಕಾಲದಲ್ಲಿ ಹಕ್ಕು ಪತ್ರ ನೀಡಿದ್ದರಿಂದ ವರ್ಲ್ಡ್ ಬುಕ್ ಆಫ್ ರೆಕಾರ್ಡ್ ತಂಡ ರಾಜ್ಯ ಸರ್ಕಾರಕ್ಕೆ ವೇದಿಕೆ‌ ಮೇಲೆ ಪ್ರೋವಿಜನಲ್ ಪ್ರಮಾಣ ಪತ್ರ‌ ನೀಡಿತು.

Advertisement

ವರ್ಲ್ಡ್ ಬುಕ್ ಆಫ್ ರಿಕಾರ್ಡ್ ಕರ್ನಾಟಕ ತಂಡದ ಉಪಾಧ್ಯಕ್ಷೆ ವಸಂತ ಕವಿತಾ (ಕೆ.ಸಿ‌.ರೆಡ್ಡಿ) ಅವರು ಕಂದಾಯ ಸಚಿವ ಆರ್. ಅಶೋಕ ಮತ್ತು ಕಲಬುರಗಿ ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಅವರಿಗೆ ಪ್ರಮಾಣ ಪತ್ರ ವಿತರಿಸಿದರು.

ಇದನ್ನೂ ಓದಿ:ಬಿಜೆಪಿ ಮತ್ತು ಆರ್‌ಎಸ್‌ಎಸ್ ದೇಶದಲ್ಲಿ ಭಯದ ವಾತಾವರಣ ಸೃಷ್ಟಿಸುತ್ತಿದೆ: ರಾಹುಲ್ ಗಾಂಧಿ

ಹಕ್ಕು ಪತ್ರ ವಿತರಣೆ‌ ಕುರಿತಂತೆ ಜಿಲ್ಲಾಡಳಿತ ಕೋರಿಕೆ ಮೇರೆಗೆ ಗುರುವಾರ ವರ್ಲ್ಡ್ ಬುಕ್ ಆಫ್ ರೆಕಾರ್ಡ್ ಕರ್ನಾಟಕ ತಂಡದ ಅಧಿಕಾರಿಗಳು ಕಾರ್ಯಕ್ರಮಕ್ಕೆ ಬಂದು ಖುದ್ದಾಗಿ ದಾಖಲೀಕರಣ‌ ಮಾಡಿತು.

ಈ ಕುರಿತು ಪ್ರತಿಕ್ರಿಯೆ ನೀಡಿದ ವಸಂತ‌ ಕವಿತಾ (ಕೆ.ಸಿ‌.ರೆಡ್ಡಿ) ಅವರು, ಕಲಬುರಗಿ ಜಿಲ್ಲಾಡಳಿತ ಕೋರಿಕೆಯಂತೆ ನಮ್ಮ ತಂಡ ಕಳೆದ 3 ತಿಂಗಳಿನಿಂದ 5 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಕಚೇರಿಯಿಂದ ದಾಖಲೆಗಳನ್ನು ಪಡೆದು ಪರಿಶೀಲಿಸಿ ಇಂದು ದಾಖಲೀಕರಣಕ್ಕೆ ಆಗಮಿಸಿದ್ದೇವೆ.  ಇಂದಿನ ಕಾರ್ಯಕ್ರಮದಲ್ಲಿ ಎಷ್ಟು ತಾಂಡಾ ನಿವಾಸಿಗಳಿಗೆ ಎಷ್ಟು ಹಕ್ಕು ಪತ್ರ ನೀಡಲಾಗಿದೆ ಎಂಬುದನ್ನು ನಿಖರ‌‌ ಸಂಖ್ಯೆ ಪಡೆದ ನಂತರ ಅಂತಿಮವಾಗಿ ರೆಕಾರ್ಡ್ ಪ್ರಮಾಣ ಪತ್ರ ನೀಡಲಾಗುವುದು ಎಂದು ತಿಳಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next