Advertisement

ಇಂದು ಖರ್ಗೆ ಶಕ್ತಿ ಕೇಂದ್ರದಲ್ಲಿ ಮೋದಿ ಬೃಹತ್‌ ರ‍್ಯಾಲಿ

12:30 AM Mar 06, 2019 | Team Udayavani |

ಕಲಬುರಗಿ: ಲೋಕಸಭೆಯಲ್ಲಿ ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆಯವರ ಭದ್ರಕೋಟೆಯಾದ ಕಲಬುರಗಿಯಲ್ಲಿ ಬುಧವಾರ ಪ್ರಧಾನಿ ನರೇಂದ್ರ ಮೋದಿ ಚುನಾವಣಾ ರಣಕಹಳೆ ಮೊಳಗಿಸಲಿದ್ದಾರೆ.

Advertisement

ಲೋಕಸಭೆ ಚುನಾವಣೆ ದಿನಾಂಕ ಘೋಷಣೆಯಾಗುವ ಮುನ್ನ ರಾಜ್ಯದಲ್ಲಿ ನಡೆ ಯುವ ಕಾರ್ಯಕ್ರಮ ಇದಾಗಿದೆ. ಮಲ್ಲಿಕಾರ್ಜುನ ಖರ್ಗೆಯವ ರನ್ನು ಈ ಬಾರಿ ಸೋಲಿಸಲೇಬೇಕು ಎನ್ನುವ ಬಿಜೆಪಿ ಇರಾದೆಯಿಂದಾಗಿ ಈ ಕಾರ್ಯಕ್ರಮ ರಾಜಕೀಯ ಮಹತ್ವ ಪಡೆದಿದೆ. ಇದಕ್ಕೆ ಪೂರಕವಾಗಿ, ಖರ್ಗೆ ಎದುರು ಸ್ಪರ್ಧಿಸುವ ಉದ್ದೇಶದಿಂದಲೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಡಾ. ಉಮೇಶ ಜಾಧವ್‌ ಈ ಸಂದರ್ಭದಲ್ಲಿ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ “ಆಯುಷ್ಮಾನ್‌ ಭಾರತ ಯೋಜನೆ’ ಫಲಾನುಭವಿ ಗಳೊಂದಿಗೆ ಸಂವಾದ, ಬಿಪಿಸಿಎಲ್‌ ಡಿಪೋಗೆ ಭೂಮಿ ಪೂಜೆ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಪ್ರಧಾನಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಬಳಿಕ ನೂತನ ವಿದ್ಯಾಲಯದ ಮೈದಾನದಲ್ಲಿ ಬೃಹತ್‌ ಬಹಿರಂಗ ಸಭೆಯಲ್ಲಿ ಮಾತನಾಡಲಿದ್ದಾರೆ.

ಹುಬ್ಬಳ್ಳಿಯಲ್ಲಿ ಕಳೆದ ತಿಂಗಳು ಬೃಹತ್‌ ರ‍್ಯಾಲಿ ಮೂಲಕ ಚುನಾವಣೆ ಕಹಳೆ ಮೊಳಗಿಸಿದ್ದ ಪ್ರಧಾನಿಯವರು, ಹೈದರಾಬಾದ್‌ -ಕರ್ನಾಟಕ ಭಾಗದ, ಕಾಂಗ್ರೆಸ್‌ ಪ್ರಾಬಲ್ಯವಿರುವ ಕಲಬುರಗಿಯಲ್ಲಿ ಈ ಕಾರ್ಯಕ್ರಮ ನಡೆಸಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next