Advertisement

ಮಹಾ- ಕರ್ನಾಟಕ ಗಡಿ ವಿವಾದದ ಬಗ್ಗೆ ಪ್ರಧಾನಿ ತಮ್ಮ ನಿಲುವು ಸ್ಪಷ್ಟಪಡಿಸಲಿ: ಠಾಕ್ರೆ ಒತ್ತಾಯ

09:16 AM Dec 11, 2022 | Team Udayavani |

ಮುಂಬೈ: ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದದ ಬಗ್ಗೆ ಪ್ರಧಾನಿ ತಮ್ಮ ನಿಲುವನ್ನು ಸ್ಪಷ್ಟಪಡಿಸಬೇಕು ಎಂದು ಶಿವಸೇನೆ ನಾಯಕ ಉದ್ಧವ್ ಠಾಕ್ರೆ ಹೇಳಿದ್ದಾರೆ.

Advertisement

ಪ್ರಧಾನಿ ನರೇಂದ್ರ ಮೋದಿಯವರ ನಾಗ್ಪುರ ಭೇಟಿಗೆ ಒಂದು ದಿನ ಮುಂಚಿತವಾಗಿ, ಉದ್ಧವ್ ಠಾಕ್ರೆ ಶನಿವಾರ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ಈ ಮಾತುಗಳನ್ನಾಡಿದರು. “ಮಹಾರಾಷ್ಟ್ರದ ಕೆಲವು ಹಳ್ಳಿಗಳ ಮೇಲೆ ಹಕ್ಕು ಚಲಾಯಿಸುತ್ತಿರುವ ಕರ್ನಾಟಕದ ಸಿಎಂ ಬಸವರಾಜ ಬೊಮ್ಮಾಯಿ ಅವರ ಬಗ್ಗೆ ಮೋದಿ ಮಾತನಾಡಬೇಕು.” ಎಂದಿದ್ದಾರೆ.

“ಪ್ರಧಾನಿ ನರೇಂದ್ರ ಮೋದಿ ಅವರು ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇ ಉದ್ಘಾಟನೆಗೆ ಬರುತ್ತಿದ್ದಾರೆ. ನಾವು ಅವರನ್ನು ಸ್ವಾಗತಿಸುತ್ತೇವೆ. ಅವರ ಭೇಟಿಯ ಸಮಯದಲ್ಲಿ ಅವರು ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದದ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟಪಡಿಸಬೇಕು” ಎಂದು ಠಾಕ್ರೆ ಹೇಳಿದರು.

ಇದನ್ನೂ ಓದಿ:ಸೋತ ಪೋರ್ಚುಗಲ್..; ಕಣ್ಣೀರಿಡುತ್ತಲೇ ಮೈದಾನ ತೊರೆದ ಕ್ರಿಸ್ಟಿಯಾನೊ ರೊನಾಲ್ಡೊ

ಮಹಾರಾಷ್ಟ್ರದ ಕೆಲವು ಗ್ರಾಮಗಳು ಕರ್ನಾಟಕಕ್ಕೆ ಸೇರಬೇಕು ಎನ್ನುತ್ತಿರುವ ಕರ್ನಾಟಕದ ಮುಖ್ಯಮಂತ್ರಿ ಬಗ್ಗೆ ಅವರು ಮಾತನಾಡಬೇಕು ಎಂದು ಠಾಕ್ರೆ ಆಗ್ರಹಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next