Advertisement

Watch: ಸ್ವಯಂ ನಿರ್ಬಂಧಕ್ಕೆ ಪ್ರಧಾನಿ ಮೋದಿ ಕರೆ; ಮಾರ್ಚ್ 22ರಂದು ದೇಶಾದ್ಯಂತ ಜನತಾ ಕರ್ಫ್ಯೂ

09:07 PM Mar 19, 2020 | Nagendra Trasi |

ಕೋವಿಡ್-19 ಮಹಾಮಾರಿಗೆ ದೇಶ ತಲ್ಲಣಗೊಂಡಿದೆ. ಐಟಿ, ಬಿಟಿಯಿಂದ ಹಿಡಿದು ಜನಸಾಮಾನ್ಯನಿಗೂ ಕೋವಿಡ್-19 ವೈರಸ್ ಸೋಂಕಿನ ಬಿಸಿ ಮುಟ್ಟಿದೆ. ಈಗಾಗಲೇ ದೇಶದಲ್ಲಿ ಕೋವಿಡ್ ಸೋಂಕು ಪೀಡಿತರ ಸಂಖ್ಯೆ ಏರುತ್ತಿದ್ದು, ಇದಕ್ಕಾಗಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಕೋವಿಡ್ 19 ವೈರಸ್ ಮಹಾಮಾರಿ ಭಾರತದಲ್ಲೂ ಕೋಲಾಹಲವನ್ನೆಬ್ಬಿಸುತ್ತಿರುವ ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ದೇಶವನ್ನುದ್ದೇಶಿಸಿ ಮಾತನಾಡಿದರು. ದೇಶ ಕಠಿಣ ಪರಿಸ್ಥಿತಿಯನ್ನು ಎದುರಿಸುತ್ತಿದ್ದು ಈ ಸಂದರ್ಭದಲ್ಲಿ ದೇಶವಾಸಿಗಳು ತಮಗೆ ಸ್ವಯಂ ನಿರ್ಬಂಧವನ್ನು ವಿಧಿಸಿಕೊಳ್ಳುವ ಮೂಲಕ ಕೋವಿಡ್ 19 ವಿರುದ್ಧದ ಹೋರಾಟದಲ್ಲಿ ತಮ್ಮ ಯೋಗದಾನವನ್ನು ನೀಡಬೇಕು ಎಂದು ಪ್ರಧಾನಿಯವರು ಇದೇ ಸಂದರ್ಭದಲ್ಲಿ ಕರೆ ನೀಡಿದರು.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next