Advertisement

ಇಂದು ಸಿಬಿಐ ವಜ್ರ ಮಹೋತ್ಸವ: ಪ್ರಧಾನಿ ಮೋದಿ ಉದ್ಘಾಟನೆ

07:17 PM Apr 02, 2023 | Team Udayavani |

ನವದೆಹಲಿ: ಕೇಂದ್ರ ತನಿಖಾ ದಳ(ಸಿಬಿಐ) ಆರಂಭವಾಗಿ 50 ವರ್ಷಗಳು ಸಂದಾಯವಾಗುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ನವದೆಹಲಿಯಲ್ಲಿ ನಡೆಯಲಿರುವ ವಜ್ರ ಮಹೋತ್ಸವ ಸಮಾರಂಭವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ.

Advertisement

ಸಮಾರಂಭದಲ್ಲಿ ವಿಶಿಷ್ಟ ಸೇವೆಗಳಿಗಾಗಿ ರಾಷ್ಟ್ರಪತಿಗಳ ಪೊಲೀಸ್‌ ಪದಕ ಹಾಗೂ ಅತ್ಯುತ್ತಮ ತನಿಖಾಧಿಕಾರಿಗಳಿಗೆ ಚಿನ್ನದ ಪದಕ ಪಡೆದ ಸಿಬಿಐ ಅಧಿಕಾರಿಗಳಿಗೆ ಪ್ರಧಾನಿ ಮೋದಿ ಅವರು ಪದಕ ಪ್ರದಾನ ಮಾಡಲಿದ್ದಾರೆ.

ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಸಿಬಿಐ ವಜ್ರ ಮಹೋತ್ಸವ ಸ್ಮರಣಾರ್ಥ ಅಂಚೆ ಇಲಾಖೆ ಹೊರತಂದಿರುವ ಅಂಚೆ ಚೀಟಿ ಬಿಡುಗಡೆಗೊಳಿಸಲಿದ್ದಾರೆ. 1963ರ ಏ.1ರಂದು ಸಿಬಿಐ ಸ್ಥಾಪನೆಯಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next