Advertisement

ದಾವಣಗೆರೆಗೆ ಪ್ರಧಾನಿ ಮೋದಿ ಪ್ರಯಾಣ; NSUI ಕಾರ್ಯಕರ್ತರ ಬಂಧನ

03:29 PM Feb 27, 2018 | Team Udayavani |

ದಾವಣಗೆರೆ: ಮಧ್ಯ ಕರ್ನಾಟಕದ ಕೇಂದ್ರ, ದೇವನಗರಿ ದಾವಣಗೆರೆಯಲ್ಲಿ ಮಂಗಳವಾರ ಬಿಜೆಪಿಯ ರೈತ ಬಂಧು ಸಮಾವೇಶದಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರು ಹುಬ್ಬಳ್ಳಿ ವಿಮಾನ ನಿಲ್ಲಾಣಕ್ಕೆ ಬಂದಿಳಿದಿದ್ದು, ಅಲ್ಲಿಂದ ಹೆಲಿಕಾಪ್ಟರ್ ನಲ್ಲಿ ದಾವಣಗೆರೆಯತ್ತ ತೆರಳಿದ್ದಾರೆ.

Advertisement

2 ವರ್ಷಕ್ಕೊಮ್ಮೆ ಆಚರಿಸಲ್ಪಡುವ ನಗರದ ದೇವತೆ ದುರ್ಗಾಂಬಿಕೆ ಜಾತ್ರೆಯ ದಿನವೇ ಪ್ರಧಾನಿ ಮೋದಿ ದಾವಣಗೆರೆಗೆ ಆಗಮಿಸುತ್ತಿದ್ದಾರೆ. ನಗರದ ಸರಕಾರಿ ಪ್ರೌಢಶಾಲಾ ಮೈದಾನದಲ್ಲಿ ಬಿಜೆಪಿ ರೈತ ಬಂಧು ಸಮಾವೇಶ ನಡೆಯಲಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಜನ್ಮದಿನದ ನಿಮಿತ್ತ ರೈತ ಸಮಾವೇಶ ಹಮ್ಮಿಕೊಳ್ಳಲಾಗಿದೆ.

ಎನ್ ಎಸ್ ಯುಐ ಕಾರ್ಯಕರ್ತರ ಬಂಧನ:

ದಾವಣಗೆರೆಗೆ ಪ್ರಧಾನಿ ಮೋದಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ನಗರದ ಅಂಬೇಡ್ಕರ್ ವೃತ್ತದಲ್ಲಿ ಎನ್ ಎಸ್ ಯುಐ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು, ಪೊಲೀಸರು ಈ ಸಂದರ್ಭದಲ್ಲಿ 20ಕ್ಕೂ ಹೆಚ್ಚು ಎನ್ ಎಸ್ ಯುಐ ಕಾರ್ಯಕರ್ತರನ್ನು ವಶಕ್ಕೆ ಪಡೆದಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next