Advertisement

ಶ್ರೀಗಳ ಆರೋಗ್ಯ ಚೇತರಿಕೆಗೆ ಹಾರೈಸಿ ಪ್ರಧಾನಿ ಕನ್ನಡದಲ್ಲಿ ಟ್ವೀಟ್

02:49 AM Jan 18, 2019 | Team Udayavani |

ತುಮಕೂರು: ವಯೋಸಹಜ ಕಾರಣಗಳಿಂದಾಗಿ ಆಸ್ಪತ್ರಗೆ ದಾಖಲಾಗಿರುವ ಸಿದ್ಧಗಂಗಾ ಮಠದ ಕಾಯಕಯೋಗಿ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಆರೋಗ್ಯಸ್ಥಿತಿ ಸ್ಥಿರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಶ್ರೀಗಳು ಇನ್ನೂ ಕೃತಕ ಉಸಿರಾಟ ವ್ಯವಸ್ಥೆಗೊಳಗಾಗಿಯೇ ಇದ್ದಾರೆ. ಮುಂಜಾನೆ 5 ಗಂಟೆಗೆ ಶ್ರೀಗಳ ರಕ್ತ ಪರೀಕ್ಷೆ ಮತ್ತು ಇತರೇ ಅಗತ್ಯ ಪರೀಕ್ಷೆಗಳನ್ನು ನಡೆಸಲಾಗಿದೆ. ಇಂದು ಬೆಳಿಗ್ಗೆ 10 ಗಂಟೆಗೆ ಶ್ರೀಗಳ ಆರೋಗ್ಯಕ್ಕೆ ಸಂಬಂಧಿಸಿದ ಹೆಲ್ತ್ ಬುಲೆಟಿನ್ ಅನ್ನು ಬಿಡುಗಡೆಗೊಳಿಸಲಾಗುವುದು ಎಂದು ತಿಳಿದುಬಂದಿದೆ.

Advertisement

ಪ್ರಧಾನಿ ಮೋದಿ ಕನ್ನಡದಲ್ಲಿ ಟ್ವೀಟ್
 

ಇದೇ ಸಂದರ್ಭದಲ್ಲಿ ಕಾಯಕಯೋಗಿ ಸಿದ್ಧಗಂಗಾ ಶ್ರೀಗಳವರ ಆರೋಗ್ಯ ಚೇತರಿಕೆಗೆ ಹಾರೈಸಿ ಪ್ರದಾನಿ ನರೇಂದ್ರ ಮೋದಿ ಅವರು ಕನ್ನಡದಲ್ಲಿ ಟ್ವೀಟ್ ಮಾಡಿದ್ದಾರೆ.

ಮಧ್ಯಾಹ್ನ ಮಠಕ್ಕೆ ಮುಖ್ಯಮಂತ್ರಿ ಭೇಟಿ
ಶ್ರೀಗಳವರ ಆರೋಗ್ಯ ಸ್ಥಿತಿಯನ್ನು ವಿಚಾರಿಸಲು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಇಂದು ಮಧ್ಯಾಹ್ನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next