Advertisement

ಅಯೋಧ್ಯೆ ತೀರ್ಪು; ನ್ಯಾಯ ಪ್ರಕ್ರಿಯೆ ಮೇಲೆ ಜನರ ನಂಬಿಕೆ ಗಟ್ಟಿಯಾಗಿದೆ; ಮೋದಿ ಟ್ವೀಟ್

09:51 AM Nov 10, 2019 | Team Udayavani |

ನವದೆಹಲಿ: ಐತಿಹಾಸಿಕ ಅಯೋಧ್ಯೆ ತೀರ್ಪಿಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದು, ದಶಕಗಳಷ್ಟು ಹಳೆಯದಾದ ವಿವಾದದ ಬಗ್ಗೆ ಸೌಹಾರ್ದಯುತ ನ್ಯಾಯ ಸಿಗುವ ಮೂಲಕ ಇತ್ಯರ್ಥವಾಗಿದೆ ಎಂದು ತಿಳಿಸಿದ್ದಾರೆ.

Advertisement

ಹಲವಾರು ಸಂದರ್ಭಗಳಲ್ಲಿ ವಿವಿಧ ದೃಷ್ಟಿಕೋನದಲ್ಲಿ ವಿಶ್ಲೇಷಿಸಲಾಗಿತ್ತು. ಆದರೆ ಈ ತೀರ್ಪು ನ್ಯಾಯ ಪ್ರಕ್ರಿಯೆ ಮೇಲಿನ ಜನರ ನಂಬಿಕೆ ಮತ್ತಷ್ಟು ಹೆಚ್ಚಾಗಿದೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.


ಇಂದು ಸುಪ್ರೀಂಕೋರ್ಟ್ ನೀಡಿರುವ ಐತಿಹಾಸಿಕ ತೀರ್ಪನ್ನು ದೇಶದ 130 ಕೋಟಿ ಭಾರತೀಯರು ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಿಕೊಳ್ಳಬೇಕಾಗಿದೆ. ಇದು ನಮ್ಮ ಒಗ್ಗಟ್ಟು ಮತ್ತು ದೇಶದ ಅಭಿವೃದ್ಧಿಗೆ ಪೂರಕವಾಗಬೇಕು. ಇದು ಪ್ರತಿಯೊಬ್ಬ ಭಾರತೀಯನಿಗೂ ಅಧಿಕಾರವನ್ನು ನೀಡಲಿದೆ ಎಂದು ಟ್ವೀಟ್ ನಲ್ಲಿ ಉಲ್ಲೇಖಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next