Advertisement

ಕರುಣಾನಿಧಿ ಅಂತಿಮ ದರ್ಶನ ಪಡೆದ ಪ್ರಧಾನಿ ನರೇಂದ್ರ ಮೋದಿ

11:35 AM Aug 08, 2018 | udayavani editorial |

ಚೆನ್ನೈ : ಪ್ರಧಾನಿ ನರೇಂದ್ರ ಮೋದಿ ಅವರಿಂದು ಬೆಳಗ್ಗೆ ಇಲ್ಲಿನ ರಾಜಾಜಿ ಹಾಲ್‌ನಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡಲಾಗಿರುವ ಅಗಲಿದ ಮಾಜಿ ಮುಖ್ಯಮಂತ್ರಿ ಎಂ ಕರುಣಾನಿಧಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಹಿರಿಯ ನಾಯಕನಿಗೆ ಗೌರವ ಅರ್ಪಿಸಿದರು. 

Advertisement

ಕರುಣಾನಿಧಿ ಅವರ ಪುತ್ರ ಎಂ ಕೆ ಸ್ಟಾಲಿನ್‌ ಅವರೊಂದಿಗೆ ಮಾತನಾಡಿದ ಪ್ರಧಾನಿ ಮೋದಿ ದುಃಖತಪ್ತ ಕುಟುಂಬದವರಿಗೆ ಸಾಂತ್ವನ ಹೇಳಿದರು. 

ಡಿಎಂಕೆ ನಾಯಕ ಕರುಣಾನಿಧಿ ಅವರ ನಿಧನಕ್ಕೆ ಶೋಕ ವ್ಯಕ್ತಪಡಿಸಿ ಶ್ರದ್ಧಾಂಜಲಿ ಅರ್ಪಿಸಿದ ಲೋಕಸಭೆ ಇಂದಿನ ಕಲಾಪವನ್ನು ಮುಂದೂಡಿತು. 

Advertisement

Udayavani is now on Telegram. Click here to join our channel and stay updated with the latest news.

Next