Advertisement

ಪ್ರಧಾನಿ ಬಳಿ ಹೋಗಲು ಸಿದ್ಧ: ಸಿಎಂ

10:56 AM Jan 03, 2018 | |

ಬೆಂಗಳೂರು: ಮಹದಾಯಿ ವಿಚಾರದಲ್ಲಿ ಮತ್ತೂಮ್ಮೆ ಸರ್ವಪಕ್ಷ ಸಭೆ ಕರೆದು ಪ್ರಧಾನಿ ನರೇಂದ್ರ ಮೋದಿ ಬಳಿ ನಿಯೋಗ ಕೊಂ
ಡೊಯ್ಯಲು ಸಿದ್ಧ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಮಹದಾಯಿ ವಿಚಾರದಲ್ಲಿ ಕಾಂಗ್ರೆಸ್‌ ಹೈಡ್ರಾಮಾ ಮಾಡುತ್ತಿದೆ ಎಂಬ ಪ್ರತಿಪಕ್ಷ ನಾಯಕ ಜಗದೀಶ್‌ ಶೆಟ್ಟರ್‌ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಮಹದಾಯಿ ವಿಚಾರದಲ್ಲಿ ನನಗೆ ಪ್ರತಿಷ್ಠೆಯಿಲ್ಲ. ಸರ್ವಪಕ್ಷ ಸಭೆ ಕರೆಯಲು ಸಿದ್ಧ, ಮತ್ತೆ ಪ್ರಧಾನಿ ಬಳಿ ಹೋಗಲು ಸಹ ಸಿದ್ಧ. ಸಮಸ್ಯೆಗೆ ಪರಿಹಾರ ಸಿಗಬೇಕು. ರಾಜ್ಯ ಸರ್ಕಾರ ಏನೆಲ್ಲಾ ಮಾಡಬಹುದೋ ಅದನ್ನೆಲ್ಲಾ ಮಾಡಿದೆ. ಪ್ರಧಾನಿ ಮಧ್ಯಸ್ಥಿಕೆಯೊಂದೇ ಪರಿಹಾರ ಎಂದು ಪುನರುಚ್ಚರಿಸಿದರು.

Advertisement

ಮಹದಾಯಿ ವಿವಾದ ಬಗೆಹರಿಯಲು ಮೂರು ದಾರಿಗಳಿವೆ. ಒಂದು ಮೂರೂ ರಾಜ್ಯದ ಮುಖ್ಯಮಂತ್ರಿಗಳು ಮುಖಾಮುಖಿ
ಕುಳಿತು ಚರ್ಚಿಸಿ ಪರಿಹಾರ ಕಂಡುಕೊಳ್ಳುವುದು. ಮತ್ತೂಂದು ಪ್ರಧಾನಿ ಮಧ್ಯಸ್ಥಿಕೆ ವಹಿಸಿ ವಿವಾದ ಬಗೆಹರಿಸುವುದು. ಮೂರನೆಯದು, ನ್ಯಾಯಾಧೀಕ ರಣದ ಮೂಲಕ ನ್ಯಾಯ ಪಡೆಯುವುದು. ಆದರೆ, ಸರ್ಕಾರದ ಮಟ್ಟದಲ್ಲಿ ಆಗಬೇಕಿರುವ ಮಾತುಕತೆ ಬಿಟ್ಟು ಬಿಜೆಪಿ ರಾಜ್ಯಾಧ್ಯಕ್ಷರಿಗೆ ಪತ್ರ ಬರೆದರೆ  ಏನು ಪ್ರಯೋಜನ. ಈ ವಿಚಾರದಲ್ಲಿ ಡ್ರಾಮಾ ಆಡುತ್ತಿರುವುದು ಯಾರು? ಎಂದು ಪ್ರಶ್ನಿಸಿದರು.

ಶೆಟ್ಟರ್‌ ಆರೋಪ: ಇದಕ್ಕೂ ಮೊದಲು ಸುದ್ದಿಗಾರರ ಜತೆ ಮಾತನಾಡಿದ ವಿಪಕ್ಷ ನಾಯಕ ಜಗದೀಶ್‌ ಶೆಟ್ಟರ್‌, ಮಹದಾಯಿ ವಿಚಾರದಲ್ಲಿ ಕಾಂಗ್ರೆಸ್‌ ಹೈಡ್ರಾಮಾ ಆಡುತ್ತಿದೆ. 40 ವರ್ಷಗಳಿಂದ ಸಮಸ್ಯೆ ಜೀವಂತವಾಗಿಟ್ಟಿದ್ದೇ ಕಾಂಗ್ರೆಸ್‌ ಎಂದು ಆರೋಪಿಸಿದರು. ಸರ್ವಪಕ್ಷ ಸಭೆಯಲ್ಲಿ ಗೋವಾ ಕಾಂಗ್ರೆಸ್‌ ನಾಯಕರ ಜತೆ ಚರ್ಚಿಸಿ ಒಪ್ಪಿಸುವುದಾಗಿ ಹೇಳಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಇದೀಗ ಸುಮ್ಮನಾಗಿದ್ದಾರೆ. ಸಿದ್ದರಾಮಯ್ಯ ಅವರಾಗಲಿ, ಎಂ.ಬಿ.ಪಾಟೀಲ್‌ ಅವರಾಗಲಿ ಗೋವಾ ಕಾಂಗ್ರೆಸ್‌ ನಾಯಕರ ಜತೆ ಮಾತುಕತೆಯೇ ನಡೆಸಿಲ್ಲ ಎಂದು ದೂರಿದರು. ಅಮಿತ್‌ ಶಾ ರಾಜ್ಯಕ್ಕೆ ಬಂದಿರುವುದು ಬೆಂಕಿ ಹಚ್ಚಲು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿರುವುದು ಸರಿಯಲ್ಲ. ದೊಡ್ಡವರ ಬಗ್ಗೆ ಇಂಥ ಮಾತುಗಳು ಸಲ್ಲ ಎಂದರು.

ಯಾಕೆ ವಿರೋಧವಿಲ್ಲ?: ತ್ರಿವಳಿ ತಲಾಖ್‌ಗೆ ತನ್ವೀರ್‌ ಸೇಠ್ ವಿರೋಧ ವ್ಯಕ್ತಪಡಿಸಿದ್ದಾರೆ. ಆದರೆ, ಲೋಕಸಭೆಯಲ್ಲಿ
ಪ್ರಸ್ತಾಪವಾದಾಗ ಕಾಂಗ್ರೆಸ್‌ ನಾಯಕರು ಯಾಕೆ ವಿರೋಧ ಮಾಡಲಿಲ್ಲ. ಆಗ ಯಾಕೆ ಸುಮ್ಮನಿದ್ದರು ಎಂದು ಶೆಟ್ಟರ್‌ ಪ್ರಶ್ನಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next