Advertisement
ಬುಧವಾರ ನವದೆಹಲಿಯ ಕರ್ನಾಟಕ ಭವನದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಭಾರತೀಯ ಜನತಾ ಪಕ್ಷದ ಸಂಸ್ಥಾಪನಾ ದಿನಾಚರಣೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾ.ಜ.ಪದ ಎಲ್ಲಾ ಪ್ರಮುಖರು ಹಾಗೂ ಬೂತ್ ಮಟ್ಟದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಭದ್ರಾ ಮೇಲ್ದಂಡೆ ಯೋಜನೆ ರಾಷ್ಟ್ರೀಯ ಯೋಜನೆ ಎಂದು ಘೋಷಿಸಲು ಆರ್ಥಿಕ ಇಲಾಖೆಯ ಅನುಮೋದನೆಯಾಗಬೇಕು ಎಂಬ ವಿಷಯವನ್ನು ಗಮನಕ್ಕೆ ತರಲಾಯಿತು. ಈ ಯೋಜನೆಯನ್ನು ರಾಷ್ಟ್ರೀಯ ಯೋಜನೆಯಿಂದ ಘೋಷಿಸುವ ಅಂತಿಮ ಘಟ್ಟದಲ್ಲಿದೆ ಎಂದು ತಿಳಿಸಿದರು.
Related Articles
ಜಿ.ಎಸ್.ಟಿ ಜಿ.ಒ. ಎಂ ಸಭೆಯ ಬಗ್ಗೆಯೂ ಚರ್ಚಿಸಲಾಯಿತು. ಸಚಿವರು ಕರ್ನಾಟಕಕ್ಕೆ ಭೇಟಿ ನೀಡುವುದಾಗಿ ತಿಳಿದ್ದಾರೆ. ಕೇಂದ್ರ ಸರ್ಕಾರದ ಯೋಜನೆಗಳಿಗೆ ಬ್ಯಾಂಕ್ ಗಳ ಮುಖಾಂತರ ಆಗಬೇಕಿರುವ ಕೆಲಸಗಳ ಬಗ್ಗೆ ವಿಶೇಷ ಸಭೆ ಕರೆಯುವುದಾಗಿ ತಿಳಿಸಿದರು. ಅಂತಾರಾಷ್ಟ್ರೀಯ ಸಿರಿಧಾನ್ಯ ದಿನಾಚರಣೆ ಇರುವುದರಿಂದ ರಾಯಚೂರಿನಲ್ಲಿ ಸಿರಿಧಾನ್ಯ ಬೆಳೆಗಾರರ ಸಭೆಯನ್ನು ಆಯೋಜಿಸಲು ತೀರ್ಮಾನಿಸಲಾಯಿತು ಎಂದು ತಿಳಿಸಿದರು.
Advertisement