Advertisement

ಅನಂತ್‌ನಾಗ್‌ನಲ್ಲಿ ಬಿಜೆಪಿ ನಾಯಕನ ಬರ್ಬರ ಹತ್ಯೆ; ಪ್ರಧಾನಿ ಖಂಡನೆ

09:20 AM May 06, 2019 | Team Udayavani |

ಶ್ರೀನಗರ : ಜಮ್ಮುಮತ್ತುಕಾಶ್ಮೀರದ ಅನಂತ್‌ನಾಗ್‌ನ ಬಿಜೆಪಿ ಉಪಾಧ್ಯಕ್ಷ ಗುಲಾಮ್‌ ಮೊಹಮದ್‌ ಮೀರ್‌ ಅವರನ್ನು ಶನಿವಾರ ದುಷ್ಕರ್ಮಿಗಳು ಗುಂಡಿಟ್ಟು ಹತ್ಯೆಗೈದಿರುವುದನ್ನು ಪ್ರಧಾನಿ ನರೇಂದ್ರ ಮೋದಿ ಅವರು ಖಂಡಿಸಿದ್ದಾರೆ.

Advertisement

ಟ್ವೀಟ್‌ ಮಾಡಿರುವ ಪ್ರಧಾನಿ ಮೋದಿ , ನಾನು ಹತ್ಯೆಯನ್ನುಬಲವಾಗಿ ಖಂಡಿಸುತ್ತೇನೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಪಕ್ಷ ಬಲಪಡಿಸಲು ಅವರು ನೀಡಿದ ಕೊಡುಗೆಯನ್ನು ಯಾವಾಗಲೂ ನೆನಪಿಸಿಕೊಳ್ಳುತ್ತೇವೆ. ನಮ್ಮ ದೇಶದಲ್ಲಿ ಇಂತಹ ಕೆಲಸಗಳಿಗೆ ಅವಕಾಶ ನೀಡುವುದಿಲ್ಲ. ಅವರ ಕುಟುಂಬ ಮತ್ತು ಹಿತೈಷಿಗಳಿಗೆ ನನ್ನ ಸಂತಾಪಗಳು ಎಂದು ಬರೆದಿದ್ದಾರೆ.

ನೌಗಾಮ್‌ನ ವೆರಿನಾಗ್‌ ಪ್ರದೇಶದಲ್ಲಿ ದುಷ್ಕರ್ಮಿಗಳು ಗುಂಡಿಕ್ಕಿ ಮೀರ್‌ ಅವರನ್ನು ಬರ್ಬರವಾಗಿ ಹತ್ಯೆಗೈದಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next