Advertisement

ವಿಷಪ್ರಸಾದ ಸಂತ್ರಸ್ತರಿಗೆ ಕೇಂದ್ರದಿಂದ ಪರಿಹಾರ

11:24 AM Jan 27, 2019 | Team Udayavani |

ಚಾಮರಾಜನಗರ: ವಿಷ ಪ್ರಸಾದ ಸೇವನೆಯಿಂದ ಮೃತಪಟ್ಟ ಕುಟುಂಬಗಳಿಗೆ ಹಾಗೂ ಅಸ್ವಸ್ಥಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಸಂತ್ರಸ್ತರಿಗೆ ಕೇಂದ್ರ ಸರ್ಕಾರದ ಪರಿಹಾರಧನ ಆದೇಶ ಪತ್ರಗಳನ್ನು ಸಂಸದ ಆರ್‌. ಧ್ರುವನಾರಾಯಣ ವಿತರಿಸಿದರು.

Advertisement

ಹನೂರು ತಾಲೂಕಿನ ಮಾರ್ಟಳ್ಳಿ ಹಾಗೂ ಎಂ.ಜಿ. ದೊಡ್ಡಿ ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂತ್ರಸ್ತರಿಗೆ ಆದೇಶಪತ್ರ ನೀಡಿ ಮಾತನಾಡಿದ ಸಂಸದರು, ದುರಂತ ದಲ್ಲಿ17 ಮಂದಿ ಮೃತಪಟ್ಟಿದ್ದು, ಪ್ರತಿ ಕುಟುಂಬಕ್ಕೆ ತಲಾ 2 ಲಕ್ಷ ರೂ. ಹಾಗೂ ಅಸ್ವಸ್ಥಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದವರಿಗೆ ತಲಾ 50 ಸಾವಿರ ರೂ. ನೀಡಲಾಗುತ್ತಿದೆ ಎಂದರು.

ಸುಳ್ವಾಡಿ ಪ್ರಕರಣದ ಬಗ್ಗೆ ಸಂಸತ್ತಿನ ಅಧಿವೇಶನದಲ್ಲಿ ಕೇಂದ್ರದಿಂದಲೂ ಪರಿಹಾರ ನೀಡಬೇಕೆಂದು ಮನವಿ ಮಾಡಿದ್ದೆ. ಇದಕ್ಕೆ ಸ್ಪಂದಿಸಿ 75 ಲಕ್ಷ ರೂ. ಪರಿಹಾರ ಬಿಡುಗಡೆ ಮಾಡಿದೆ ಎಂದು ತಿಳಿಸಿದರು.

ಶಾಸಕ‌ ಆರ್‌. ನರೇಂದ್ರ, ಜಿಪಂ ಅಧ್ಯಕ್ಷೆ ಶಿವಮ್ಮ, ಉಪಾಧ್ಯಕ್ಷ ಜೆ. ಯೋಗೀಶ್‌, ಸದಸ್ಯರಾದ ಬಸವರಾಜು, ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್‌. ಆನಂದ್‌, ತಹಶೀಲ್ದಾರ್‌ ರಾಯಪ್ಪ ಹುಣಸಗಿ, ಜಿಪಂ ಮಾಜಿ ಸದಸ್ಯರಾದ ಮರಿಸ್ವಾಮಿ, ಈಶ್ವರ್‌, ಶಿವಕುಮಾರ್‌ ಇತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next