Advertisement

ಉಡುಪಿ: ಪೋಕ್ಸೋ ಪ್ರಕರಣದಲ್ಲಿ ಸಾಕ್ಷ್ಯ ಹೇಳಿದ ವ್ಯಕ್ತಿಯ ಅಪಹರಿಸಿ ಹಲ್ಲೆ

09:08 PM May 05, 2023 | Team Udayavani |

ಉಡುಪಿ: ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿ ಸಾಕ್ಷ್ಯ ಹೇಳಿದ ವ್ಯಕ್ತಿಯನ್ನು ಅಪಹರಿಸಿ ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿ ಹಿಂಸೆ ನೀಡಿರುವ ಬಗ್ಗೆ ಉಡುಪಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

ನಿಟ್ಟೆ ಲೆಮಿನಾ ಕ್ರಾಸ್‌ ನಿವಾಸಿ ಅಬ್ದುಲ್‌ ಜಬ್ಟಾರ್‌ (38) ಮೇಲೆ ಹಲ್ಲೆ ನಡೆದಿದೆ. ಜಬ್ಟಾರ್‌ ಮೇ 3ರಂದು ಉಡುಪಿ ಪೋಕ್ಸೋ ನ್ಯಾಯಾಲಯಕ್ಕೆ ಸಾಕ್ಷಿ ನುಡಿಯಲು ಹೋಗಿದ್ದರು. ಸಾಕ್ಷಿ ನುಡಿದು ಸಂಬಂಧಿಕರ ಮನೆಗೆ ಆಟೋದಲ್ಲಿ ತೆರಳುತ್ತಿದ್ದಾಗ ಉಡುಪಿ ಗುಂಡಿಬೈಲು ರಸಿಕಾ ಬಾರ್‌ ಬಳಿ ಎರಡು ಕಾರು ಮತ್ತು ಒಂದು ದ್ವಿಚಕ್ರ ವಾಹನದಲ್ಲಿ ಬಂದು ಅಡ್ಡಗಟ್ಟಿ ಅಬ್ದುಲ್‌ ಜಬ್ಟಾರ್‌ ಅವರ ಬಟ್ಟೆಯನ್ನು ಕಳಚಿ ಹಲ್ಲೆ ಮಾಡಿದ್ದಾರೆಂದು ದೂರಲಾಗಿದೆ.

ತಂಡದಲ್ಲಿದ್ದ ಆರೋಪಿಗಳಾದ ಫಾರೂಕ್‌, ಶಾರೂಕ್‌, ಅನಿಲ್, ಇಕ್ಬಾಲ್‌ ಸಾಣೂರ್‌ ಸೇರಿಕೊಂಡು ಜಬ್ಟಾರ್‌ ಅವರನ್ನು ಆಟೋ ರಿಕ್ಷಾದಿಂದ ಹೊರಗೆ ಎಳೆದು ಕಾರಿನೊಳಗೆ ಬಲಾತ್ಕಾರವಾಗಿ ಕೂರಿಸಿಕೊಂಡು ಅಜ್ಞಾತ ಸ್ಥಳಕ್ಕೆ ಕರೆದೊಯ್ದು ಅಲ್ಲಿ ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ್ದಾರೆ ಎಂದು ದೂರಲಾಗಿದೆ.

ಬಳಿಕ ಮೇ 4ರಂದು ಬೆಳಗ್ಗೆ 10 ಗಂಟೆಗೆ ಬಂಟಕಲ್‌ ಬಿ.ಸಿ. ರೋಡ್‌ ಪಂಜಿಮಾರು ಬಳಿ ಕರೆದೊಯ್ದು ಪೊದೆಯೊಂದಕ್ಕೆ ದೂಡಿ ಹಾಕಿ ಪರಾರಿಯಾಗಿದ್ದಾರೆ ಎಂದು ದೂರಿ ನಲ್ಲಿ ತಿಳಿಸಲಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next