Advertisement

ಗಾಂಜಾ ಸೇವನೆ: ಆರೋಪಿ ವಶಕ್ಕೆ

07:48 PM Jun 16, 2022 | Team Udayavani |

ಬಂಟ್ವಾಳ: ಸಜೀಪ ಜಂಕ್ಷನ್‌ನಲ್ಲಿ ಗಾಂಜಾ ಸೇವಿಸಿ ನಶೆಯಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement

ಸಜೀಪನಡು ಗ್ರಾಮದ ಕುಂಟಾಲ್‌ಗ‌ುಡ್ಡೆ ನಿವಾಸಿ ಮೊಹಮ್ಮದ್‌ ಜಾಫರ್‌ (34) ಗಾಂಜಾ ನಶೆಯಲ್ಲಿದ್ದ ಆರೋಪಿಯಾಗಿದ್ದಾನೆ.

ಬಂಟ್ವಾಳ ಗ್ರಾಮಾಂತರ ಪಿಎಸ್‌ಐ ಹರೀಶ್‌ ಎಂ.ಆರ್‌. ಅವರು ಜೂ. 15ರ ರಾತ್ರಿ ಗಸ್ತು ತಿರುಗುತ್ತಿದ್ದ ವೇಳೆಗೆ ಬಂದ ಮಾಹಿತಿಯಂತೆ ಸಜೀಪ ಜಂಕ್ಷನ್‌ನಲ್ಲಿದ್ದ ವ್ಯಕ್ತಿಯೋರ್ವ ಗಾಂಜಾ ನಶೆಯಲ್ಲಿದ್ದುದು ಕಂಡುಬಂದಿದೆ. ಬಳಿಕ ಆತನನ್ನು ವಶಕ್ಕೆ ಪಡೆದು ದೇರಳಕಟ್ಟೆ ಆಸ್ಪತ್ರೆಯಲ್ಲಿ ಪರೀಕ್ಷೆಗೆ ಒಳಪಡಿಸಿದಾಗ ಗಾಂಜಾ ಸೇವಿಸಿರುವುದು ದೃಢಪಟ್ಟಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಗಾಂಜಾ ಸೇವನೆ: ಓರ್ವ ವಶಕ್ಕೆ

ಉಡುಪಿ: ಮಣಿಪಾಲದ ಫ್ಲ್ಯಾಟ್‌ವೊಂದರಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಪೂರ್ಣ ಸೋಮೇಶ್ವರ (23) ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಫಾರೆನ್ಸಿಕ್‌ ವರದಿಯಲ್ಲಿ ಗಾಂಜಾ ಸೇವನೆ ದೃಢಪಟ್ಟಿರುವುದರಿಂದ ಆತನ ಮೇಲೆ ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

ಗಾಂಜಾ ಸೇವನೆ: ಬಂಧನ

ಕುಂದಾಪುರ: ಇಲ್ಲಿನ ಹೊಸ ಬಸ್‌ ನಿಲ್ದಾಣದ ಬಳಿ ಗಾಂಜಾ ಸೇವನೆ ಮಾಡುತ್ತಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದ ಪೊಲೀಸರು ಮಣಿಪಾಲದಲ್ಲಿ ವೈದ್ಯಕೀಯ ತಪಾಸಣೆಗೆ ಹಾಜರುಪಡಿಸಿದ್ದಾರೆ. ಪರೀಕ್ಷಿಸಿದ ವೈದ್ಯರು, ಬಂಧಿತ ಗಾಂಜಾ ಸೇವಿಸಿರುವುದನ್ನು ದೃಢಪಡಿಸಿದ್ದು, ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next