Advertisement

ಅಕ್ರಮ ಮರಳು ಅಡ್ಡೆಗೆ ದಾಳಿ

10:32 AM Feb 01, 2018 | Team Udayavani |

ಪುಂಜಾಲಕಟ್ಟೆ: ಬಂಟ್ವಾಳ ತಾಲೂಕಿನ ಸರಪಾಡಿ ಮತ್ತು ಬರಿಮಾರಿನಲ್ಲಿ ಅಕ್ರಮ ಮರಳು ಅಡ್ಡೆಗೆ ಬಂಟ್ವಾಳ ಗ್ರಾಮಾಂತರ  ಪೊಲೀಸರು ಹಾಗೂ ಗಣಿ ಇಲಾಖಾ ಅಧಿಕಾರಿಗಳು ಬುಧವಾರ ದಾಳಿ ನಡೆಸಿ ಲಕ್ಷಾಂತರ ರೂ. ಮೌಲ್ಯದ ಮರಳು, ನಾಲ್ಕು ಯಾಂತ್ರೀಕೃತ ದೋಣಿ ಹಾಗೂ 1 ಲಾರಿಯನ್ನು ವಶಪಡಿಸಿಕೊಂಡಿದ್ದಾರೆ.

Advertisement

ಖಚಿತ ಮಾಹಿತಿ ಮೇರೆಗೆ  ಎಸ್ಪಿ ರವಿಕಾಂತೇ ಗೌಡ ಅವರ ಮಾರ್ಗ ದರ್ಶನದಲ್ಲಿ ಬಂಟ್ವಾಳ ಗ್ರಾಮಾಂತರ ಎಸ್ಸೆ ಪ್ರಸನ್ನ ಅವರ ನೇತೃತ್ವದ ತಂಡ ಈ ದಾಳಿ ನಡೆಸಿದೆ. ಮರಳುಗಾರಿಕೆಯಲ್ಲಿ ತೊಡಗಿದ್ದ ಆರೋಪಿಗಳು ಪರಾರಿಯಾಗಿದ್ದಾರೆ. ಸ್ವಾಧೀನಪಡಿಸಿಕೊಂಡಿರುವ ಮರಳು,  ದೋಣಿ ಹಾಗೂ  ಲಾರಿಯ ಮೌಲ್ಯ ಸುಮಾರು 5 ಲಕ್ಷ ರೂ. ಆಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಈ ಸಂಬಂಧ ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next