Advertisement

Police ಬಲ ಬಳಸಿ ಹೋರಾಟ ಹತ್ತಿಕ್ಕುವ ಯತ್ನ: ವಿಜಯೇಂದ್ರ ಕಿಡಿ

11:08 PM Jul 12, 2024 | Team Udayavani |

ಬೆಂಗಳೂರು: ಮುಡಾ ಅಕ್ರಮದ ವಿರುದ್ಧ ಬಿಜೆಪಿ ನಡೆಸಿರುವ ಹೋರಾಟವನ್ನು ಪೊಲೀಸ್‌ ಬಲ ಬಳಸಿ ರಾಜ್ಯ ಸರಕಾರ ಹತ್ತಿಕ್ಕಲು ಪ್ರಯತ್ನಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಕಿಡಿ ಕಾರಿದರು.

Advertisement

ಮೈಸೂರಿನ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ಅವರನ್ನು ನೈಸ್‌ ರಸ್ತೆ ಜಂಕ್ಷನ್‌ ಬಳಿ ಪೊಲೀಸರು ವಶಕ್ಕೆ ಪಡೆದ ಅನಂತರ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅವರು, ಈ ಅಕ್ರಮದಿಂದ ಸಿಎಂ ಸಿದ್ದರಾಮಯ್ಯ ಅವರ ಮುಖವಾಡ ಕಳಚಿದೆ. ಒಂದೆಡೆ ದಲಿತರ ಹಣ ಲೂಟಿ ಹೊಡೆಯುತ್ತಿದ್ದರೆ, ಮತ್ತೊಂದೆಡೆ ಹರಾಜಿನ ಮೂಲಕ ಬಡವರಿಗೆ ಹಂಚಬೇಕಾದ ನಿವೇಶನಗಳನ್ನು ಪ್ರಭಾವಿಗಳು ಕಬಳಿಸಿದ್ದಾರೆ.

ಕಾಂಗ್ರೆಸ್‌ ಸರಕಾರದ ಪಾಪದ ಕೊಡ ತುಂಬಿದೆ ಎಂದು ವಾಗ್ಧಾಳಿ ನಡೆಸಿದರು. ಈ ಬಗ್ಗೆ ಸಿದ್ದರಾಮಯ್ಯನವರು ಉತ್ತರ ಕೊಡಲೇಬೇಕಾಗುತ್ತದೆ. ಬಿಜೆಪಿಯ ಶಾಂತಿಯುತ ಹೋರಾಟಕ್ಕೆ ಕಲ್ಲು ಹಾಕಿದ ಮಾತ್ರಕ್ಕೆ ಎಲ್ಲವನ್ನು ನಿಭಾಯಿಸಿದೆ ಎಂದು ಬೀಗಬೇಡಿ. ಈ ಪ್ರಕರಣವನ್ನು ನೀವು ಸಿಬಿಐಗೆ ಕೊಡಲೇಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next