Advertisement

ಕಾಂಗ್ರೆಸ್‌ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು

01:04 PM May 29, 2017 | Team Udayavani |

ಕಣ್ಣೂರು: ಕಸಾಯಿಖಾನೆಗಳಿಗೆ ಗೋವು ಮಾರಾಟ ನಿಷೇಧ ಮಾಡಿರುವ ಕೇಂದ್ರದ ಕ್ರಮ ವಿರೋಧಿಸಿ ಕಣ್ಣೂರಿನಲ್ಲಿ ಕರುವಿನ ತಲೆ ಕತ್ತರಿಸಿ ಪ್ರತಿಭಟನೆ ಮಾಡಿದ ಯುವ ಕಾಂಗ್ರೆಸ್‌ನ ಕೆಲವು ಕಾರ್ಯಕರ್ತರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಕೇರಳ ಬಿಜೆಪಿ ಘಟಕ ಇದರ ವಿರುದ್ಧ ಆಕ್ಷೇಪವೆತ್ತಿ ಈ ಚಿತ್ರವನ್ನು ಸಾಮಾಜಿಕ ಮಾಧ್ಯಮದಲ್ಲಿ ಅಪ್‌ಲೋಡ್‌ ಮಾಡಿ, ಕ್ರಮಕ್ಕೆ ಒತ್ತಾಯಿಸಿತ್ತು. ಕೇಂದ್ರದ ನಿರ್ಧಾರ ಪ್ರಶ್ನಿಸಿ ಕಾಂಗ್ರೆಸ್‌ ಮತ್ತು ಎಡರಂಗದ ಕಾರ್ಯಕರ್ತರು ರಾಜ್ಯದ 200 ಕಡೆ ಬೀಫ್ ಫೆಸ್ಟಿವಲ್‌ ನಡೆಸಿದ್ದರು. ಕಣ್ಣೂರಿನಲ್ಲಿ ನಡೆದ ಪ್ರತಿಭಟನೆಯ ವಿರುದ್ಧ ಬಿಜೆಪಿ ಯುವಮೋರ್ಚಾ ಪೊಲೀಸರಿಗೆ ದೂರು ನೀಡಿದ ಹಿನ್ನೆಲೆಯಲ್ಲಿ ಪೊಲೀಸರು ಯುವ ಕಾಂಗ್ರೆಸ್‌ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next