Advertisement

ಪೊಲೀಸ್‌ ದೂರು ಪ್ರಾಧಿಕಾರ: ನ್ಯಾ| ಸುಧೀಂದ್ರ ರಾವ್‌ ಅಧ್ಯಕ್ಷ

10:32 PM Jul 31, 2023 | Team Udayavani |

 

Advertisement

ಬೆಂಗಳೂರು: ಕರ್ನಾಟಕ ಪೊಲೀಸ್‌ ದೂರು ಪ್ರಾಧಿಕಾರಕ್ಕೆ ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಎನ್‌.ಕೆ. ಸುಧೀಂದ್ರ ರಾವ್‌ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಿ ಸರಕಾರ ಸೋಮವಾರ (ಜು.31) ಆದೇಶ ಹೊರಡಿಸಿದೆ.

ಪ್ರಾಧಿಕಾರಕ್ಕೆ ಈ ಹಿಂದೆ ಅಧ್ಯಕ್ಷರಾಗಿದ್ದ ನ್ಯಾ| ಸಿ.ಆರ್‌.ಕುಮಾರಸ್ವಾಮಿ ಅವರ ಅವಧಿ ಮುಗಿದ ಹಿನ್ನೆಲೆಯಲ್ಲಿ 2022ರ ಆಗಸ್ಟ್‌ 11ರಿಂದ ಅಧ್ಯಕ್ಷ ಸ್ಥಾನ ಖಾಲಿ ಉಳಿದಿತ್ತು. 11 ತಿಂಗಳ ಬಳಿಕ ಈಗ ಸರಕಾರ ಹೊಸ ಅಧ್ಯಕ್ಷರನ್ನು ನೇಮಕ ಮಾಡಿದೆ. ಪ್ರಾಧಿಕಾರದ ಇಬ್ಬರು ಸದಸ್ಯರ ಪೈಕಿ ಒಂದು ಸದಸ್ಯ ಸ್ಥಾನ 2020ರ ಮೇ 8ರಿಂದ ಮತ್ತೂಂದು ಸ್ಥಾನ 2022ರ ಡಿ.28ರಿಂದ ಖಾಲಿ ಇದ್ದು, ಇವುಗಳಿಗೆ ಇನ್ನಷ್ಟೇ ನೇಮಕಾತಿ ಆಗಬೇಕಿದೆ.

ಹಲವು ತಿಂಗಳಿಂದ ಖಾಲಿ ಉಳಿದಿರುವ ಪೊಲೀಸ್‌ ದೂರು ಪ್ರಾಧಿಕಾರದ ಅಧ್ಯಕ್ಷ ಹಾಗೂ ಸದಸ್ಯ ಸ್ಥಾನಗಳನ್ನು ತ್ವರಿತವಾಗಿ ಭರ್ತಿ ಮಾಡುವಂತೆ ಸರಕಾರಕ್ಕೆ ನಿರ್ದೇಶನ ನೀಡಲು ಕೋರಿ ವಕೀಲೆ ಸುಧಾ ಕಾಟ್ವಾ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ಈ ವಿಚಾರವಾಗಿ ಹೈಕೋರ್ಟ್‌ ಸರಕಾರಕ್ಕೆ ಹಲವು ಬಾರಿ ನಿರ್ದೇಶನ ನೀಡಿತ್ತು. ಅಂತಿಮವಾಗಿ ಎರಡು ವಾರಗಳಲ್ಲಿ ಅಧ್ಯಕ್ಷ ಮತ್ತು ಸದಸ್ಯರ ನೇಮಕ ಪ್ರಕ್ರಿಯೆ ಪೂರ್ಣಗೊಳಿಸದಿದ್ದರೆ ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ವಿಚಾರಣೆಗೆ ಖುದ್ದು ಹಾಜರಾಗಿ ವಿವರಣೆ ನೀಡಬೇಕು ಎಂದು ಹೈಕೋರ್ಟ್‌ ಜು. 24ರಂದು ತಾಕೀತು ಮಾಡಿತ್ತು.

Advertisement

Udayavani is now on Telegram. Click here to join our channel and stay updated with the latest news.

Next