Advertisement

ಲಂಚ ಸ್ವೀಕರಿಸುವಾಗ ಎಸಿಬಿ ಬಲೆಗೆ ಬಿದ್ದ ಪೊಲೀಸ್ ಕಾನ್ಸ್ಟೇಬಲ್

01:37 PM Dec 16, 2019 | keerthan |

ಶಿವಮೊಗ್ಗ: ಇಲ್ಲಿನ ತುಂಗಾನಗರ ಠಾಣೆಯ ಪೊಲೀಸ್ ಕಾನ್ಸ್ಟೇಬಲ್ ಓರ್ವರು ಲಂಚ ಸ್ವೀಕರಿಸುವ ವೇಳೆ ಎಸಿಬಿ ಬಲೆಗೆ ಬಿದ್ದ ಘಟನೆ ಸೋಮವಾರ ವರದಿಯಾಗಿದೆ.

Advertisement

ತುಂಗಾನಗರ ಠಾಣೆಯ ನಾರಾಯಣ ಸ್ವಾಮಿ ಎಸಿಬಿ ಬಲೆಗೆ ಬಿದ್ದ ಪೊಲೀಸ್ ಕಾನ್ಸ್ಟೇಬಲ್.

ಅಕ್ರಮವಾಗಿ ಮರಳು ಸಾಗಿಸಲು ಸಹಕರಿಸುವುದಾಗಿ ಲಂಚ ಸ್ವೀಕರಿಸುತ್ತಿದ್ದ ನಾರಾಯಣ ಸ್ವಾಮಿ ಇಂದು ಗೋಪಾಳ ಬಸ್ ನಿಲ್ದಾಣದ ಬಳಿ ಲಂಚ ಸ್ವೀಕರಿಸುವಾಗ ಎಸಿಬಿ ಬಲೆಗೆ ಬಿದ್ದಿದ್ದಾರೆ.

ಟಿಪ್ಪುನಗರದ ಅಬ್ದುಲ್ ಸಲೀಂ ಅವರಿಂದ ಏಳು ಸಾವಿರ ಸ್ವೀಕರಿಸುವಾಗ ಎಸಿಬಿ ಡಿವೈಎಸ್ಪಿ ಮನೋಜ್ ಕುಮಾರ್ ನೇತೃತ್ವದಲ್ಲಿ ದಾಳಿ ಮಾಡಿದ ಅಧಿಕಾರಿಗಳು ದಾಳಿ ಮಾಡಿ ನಾರಾಯಣ ಸ್ವಾಮಿಯನ್ನು ಬಂಧಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next