Advertisement

ಪೊಲೀಸ್ ಇಲಾಖೆ ನೈತಿಕ ಸ್ಥೈರ್ಯವನ್ನು ಕಳೆದುಕೊಂಡಿದೆ : ಸಿದ್ದರಾಮಯ್ಯ ಕಿಡಿ

07:26 PM Jul 15, 2022 | Team Udayavani |

ಬೆಂಗಳೂರು : ‘ರಾಜ್ಯದಲ್ಲಿನ ಶಾಂತಿ ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಕೆಟ್ಟುಹೋಗುತ್ತಿದ್ದು ಅನ್ಯಾಯ-ದೌರ್ಜನ್ಯಗಳಿಗೆ ಬಲಿಯಾಗಿರುವ ಜನರು ಪೊಲೀಸರ ನಿಷ್ಕ್ರೀಯತೆಯಿಂದಾಗಿ ಹತಾಶರಾಗಿದ್ದಾರೆ. ಅಸಮರ್ಥ ಗೃಹಸಚಿವರ ಬೇಜವಾಬ್ದಾರಿ ಹೇಳಿಕೆಗಳಿಂದಾಗಿ ಪೊಲೀಸ್ ಇಲಾಖೆ ನೈತಿಕ ಸ್ಥೈರ್ಯವನ್ನು ಕಳೆದುಕೊಂಡಿದೆ’ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕಿಡಿ ಕಾರಿ ಟ್ವೀಟ್ ಮಾಡಿದ್ದಾರೆ.

Advertisement

‘ಬಾಗಲಕೋಟೆಯ ಕೆರೂರ ಪಟ್ಟಣದಲ್ಲಿ ಇತ್ತೀಚೆಗೆ ನಡೆದಿದ್ದ ಗಲಭೆಯಲ್ಲಿ ಗಾಯಗೊಂಡವರು ಮತ್ತು ಕುಟುಂಬದ ಸದಸ್ಯರನ್ನು ಭೇಟಿ ಮಾಡಿ ಸಾಂತ್ವನ ಹೇಳಿದೆ. ಘಟನೆಯ ಸುದ್ದಿ ಗೊತ್ತಾದ ತಕ್ಷಣ ಜಿಲ್ಲಾ ಪೊಲೀಸ್ ವರಿಷ್ಠರ ಜೊತೆ ಮಾತನಾಡಿ ಗಲಭೆಕೋರರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳಬೇಕೆಂದು ತಿಳಿಸಿದ್ದೆ, ಉದ್ರಿಕ್ತ ಸ್ಥಿತಿಯಲ್ಲಿ ಭೇಟಿ ನೀಡುವುದು ಸೂಕ್ತ ಅಲ್ಲವೆಂದು ತಿಳಿದು ಕೆಲವು ದಿನಗಳ ನಂತರ ಇಂದು ಬಂದು ಎರಡೂ ಗುಂಪಿನವರನ್ನು ಭೇಟಿ ಮಾಡಿದೆ. ಇಂತಹ ಘಟನೆಗಳಲ್ಲಿ ಅನವಶ್ಯಕವಾಗಿ ಪ್ರಚೋದನೆ ನೀಡಿ ಶಾಂತಿ-ಸೌಹಾರ್ದತೆ ಕೆಡಿಸುವ ಕೆಲಸವನ್ನು ಯಾರೂ ಮಾಡಬಾರದು’ ಎಂದು ಟ್ವೀಟ್ ನಲ್ಲಿ ಬರೆದಿದ್ದಾರೆ.

‘ಗಲಭೆಯಲ್ಲಿ ಗಾಯಗೊಂಡವರ ಕುಟುಂಬಕ್ಕೆ ವೈಯಕ್ತಿಕ ಪರಿಹಾರ ರೂಪದಲ್ಲಿ ಒಂದಷ್ಟು ಹಣ ನೀಡಿದ್ದೆ. ಹಣ ಬೇಡ, ನ್ಯಾಯ ಕೊಡಿ ಎಂದು ನೊಂದ ಕುಟುಂಬದವರು ಕೇಳಿದ್ದಾರೆ. ಅವರ ನೋವನ್ನು ಅರ್ಥಮಾಡಿಕೊಳ್ಳಬಲ್ಲೆ. ನಿಷ್ಪಕ್ಷಪಾತ ತನಿಖೆ ನಡೆಸಿ ನೊಂದ ಕುಟುಂಬಗಳಿಗೆ ನ್ಯಾಯ ಒದಗಿಸುವುದು ರಾಜ್ಯ ಬಿಜೆಪಿ ಸರ್ಕಾರದ ಕರ್ತವ್ಯವಾಗಿದೆ’ ಎಂದು ಟ್ವೀಟ್ ನಲ್ಲಿ ಬರೆದಿದ್ದಾರೆ.

ಸಿದ್ದರಾಮಯ್ಯ ಅವರು ಗುಂಪು ಘರ್ಷಣೆ ಗಾಯಾಳುಗಳ ಭೇಟಿಗೆ ಬಾಗಲಕೋಟೆಗೆ ಆಗಮಿಸಿದ ವೇಳೆ, ಗಾಯಾಳುಗಳ ಸಂಬಂಧಿಗಳು ಆಕ್ರೋಶ ಹೊರ ಹಾಕಿದ್ದು, ಗಾಯಾಳುಗಳಿಗೆ ನೀಡಿದ ಹಣವನ್ನೇ ಮರಳಿ ಸಿದ್ದರಾಮಯ್ಯಗೆ ನೀಡಲು ಮುಂದಾಗಿದ್ದರು, ನಮಗೆ ನ್ಯಾಯ ಬೇಕು, ಹಣ ಬೇಡ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದರು.

ವಿದ್ಯುತ್ ಗೆ ಬಲಿಯಾದವಳ ನಿವಾಸಕ್ಕೆ ಭೇಟಿ

Advertisement

ಬಾದಾಮಿ ವಿಧಾನಸಭೆ ಕ್ಷೇತ್ರದ ಗೋವಿನಕೊಪ್ಪ ಗ್ರಾಮದಲ್ಲಿ ವಿದ್ಯುತ್ ತಂತಿ ತಗುಲಿ ಮೃತರಾದ ದೇವಕ್ಕ ಬಸವರಾಜು ಮೊರಬದ ಅವರ ನಿವಾಸಕ್ಕೆ ಭೇಟಿ ನೀಡಿ, ಮೃತರ ಕುಟುಂಬದವರಿಗೆ ಸಾಂತ್ವನ ಹೇಳಿ, ವೈಯಕ್ತಿಕ ಪರಿಹಾರವಾಗಿ 50 ಸಾವಿರ ರೂ. ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next