Advertisement

ಉಡುಪಿ: ಸಂಘಟನೆಯ ಪ್ರಮುಖರಿಗೆ ಎಚ್ಚರ ವಹಿಸಲು ಸಂದೇಶ

12:56 AM Jul 29, 2022 | Team Udayavani |

ಉಡುಪಿ: ಬೆಳ್ಳಾರೆಯ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಅವರ ಹತ್ಯೆಯ ಅನಂತರ ಗುರುವಾರ ಸಂಜೆ ಸುರತ್ಕಲ್‌ನಲ್ಲಿ ಇನ್ನೋರ್ವ ಯುವಕನ ಕೊಲೆ ನಡೆದಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ  ವಿವಿಧ ಸಂಘಟನೆಗಳ ಪ್ರಮುಖರಿಗೆ ಎಚ್ಚರದಿಂದ ಇರುವಂತೆ ಪೊಲೀಸ್‌ ಇಲಾಖೆಯಿಂದ ಸಂದೇಶ ರವಾನೆ ಮಾಡಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

Advertisement

ಪ್ರವೀಣ್‌ ಹತ್ಯೆಯಿಂದ ಇಡೀ ಕರಾವಳಿ ಬೆಚ್ಚಿಬಿದ್ದಿದ್ದು, ಈಗ ಮತ್ತೂಂದು ಕೊಲೆ ನಡೆದಿರುವುದರಿಂದ ಪೊಲೀಸ್‌ ಇಲಾಖೆ ಕೂಡ ವಿಶೇಷ ಕಾರ್ಯಾಚರಣೆ ನಡೆಸುತ್ತಿದೆ. ಹಾಗೆಯೇ ಸಂಘ ಪರಿವಾರ ಸಹಿತವಾಗಿ ವಿವಿಧ ಸಂಘಟನೆಗಳ ಪ್ರಮುಖರಿಗೆ ಎಚ್ಚರದಿಂದ ಇರುವಂತೆ ಹಾಗೂ ರಾತ್ರಿ ವೇಳೆಯಲ್ಲಿ ಒಬ್ಬೊಬ್ಬರಾಗಿ ಸುತ್ತಾಡದಂತೆ ಸಲಹೆ ರವಾನೆ ಮಾಡಿದೆ ಎಂದು ಹೇಳಲಾಗುತ್ತಿದೆ.

ಬೀಟ್‌ ವ್ಯವಸ್ಥೆ ಬಿಗಿ :

ಜಿಲ್ಲೆಯ ನಗರ ಮತ್ತು ಗ್ರಾಮೀಣ ಭಾಗ ಸೇರಿದಂತೆ ಸೂಕ್ಷ್ಮ ಪ್ರದೇಶ, ಚೆಕ್‌ಪೋಸ್ಟ್‌ಗಳಲ್ಲಿ ಬೀಟ್‌ ವ್ಯವಸ್ಥೆಯನ್ನು ಬಿಗಿಗೊಳಿಸಲಾಗಿದೆ. ಅನುಮಾನಾಸ್ಪದ ನಡೆಗಳ ಬಗ್ಗೆ ಮಾಹಿತಿ ಸಂಗ್ರಹಿಸಲಾ ಗುತ್ತದೆ. ಸಾರ್ವಜನಿಕರು ಕೂಡ ಈ ಬಗ್ಗೆ ಯಾವುದೇ ಮಾಹಿತಿ ಇದ್ದರೂ ಪೊಲೀಸ್‌ ಇಲಾಖೆಗೆ ನೀಡಬಹುದು. ಚೆಕ್‌ಪೋಸ್ಟ್‌ಗಳಲ್ಲಿ ನಿರಂತರ ತಪಾಸಣೆ ನಡೆಯುತ್ತಿದೆ. ಎನ್‌.ವಿಷ್ಣುವರ್ಧನ್‌, ಎಸ್ಪಿ, ಉಡುಪಿ

Advertisement

Udayavani is now on Telegram. Click here to join our channel and stay updated with the latest news.

Next