Advertisement

ಡಿಕೆಶಿ, ಸಿದ್ದರಾಮಯ್ಯ ಪೊಲೀಸ್ ಬೆಂಗಾವಲು ವಾಹನ ಅಪಘಾತ

05:59 PM Dec 03, 2021 | Team Udayavani |

ಚಿಕ್ಕಮಗಳೂರು:ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಬೆಂಗಾವಲು ಒದಗಿಸಿದ್ದ ಪೊಲೀಸ್ ವಾಹನ ಚಿಕ್ಕಮಗಳೂರಿನ ಲಿಂಗದಹಳ್ಳಿ ಸಮೀಪ ಶುಕ್ರವಾರ ಸಂಜೆ ಅಪಘಾತಕ್ಕೀಡಾಗಿ ಸಿಬ್ಬಂದಿಯೊಬ್ಬರು ಗಾಯಗೊಂಡಿದ್ದಾರೆ.

Advertisement

ಅವರನ್ನು ತಕ್ಷಣ ಆಸ್ಪತ್ರೆಗೆ ಸೇರಿಸಲು ನೆರವಾಗುವುದರ ಮೂಲಕ ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯನವರು ಮಾನವೀಯತೆ ಮೆರೆದಿದ್ದಾರೆ.

ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಮತ್ತಿತರರು ಚಿಕ್ಕಮಗಳೂರಿನಲ್ಲಿ ಗ್ರಾಮ ಸ್ವರಾಜ್ ಸಮಾವೇಶ ಮುಗಿಸಿ ಶಿವಮೊಗ್ಗಕ್ಕೆ ತೆರಳುತ್ತಿದ್ದ ಕಾರಿಗೆ ಭದ್ರತೆ ಒದಗಿಸಿದ್ದ ಚಿಕ್ಕಮಗಳೂರು ಪೊಲೀಸ್ ಬೆಂಗಾವಲು ವಾಹನ ಚಿಕ್ಕಮಗಳೂರು ಸಮೀಪದ ಲಿಂಗದಹಳ್ಳಿ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಬದಿ ಕಾಫಿತೋಟದ ಹಳ್ಳಕ್ಕೆ ಉರುಳಿಬಿತ್ತು. ತತ್ಪರಿಣಾಮ ಪೊಲೀಸ್ ಸಿಬ್ಬಂದಿಯೊಬ್ಬರ ತಲೆಗೆ ತೀವ್ರ ಪೆಟ್ಟಾಯಿತು. ಉಳಿದವರಿಗೂ ಅಲ್ಪಸ್ವಲ್ಪ ಗಾಯಗಳಾದವು.

ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯನವರು ಪ್ರಯಾಣವನ್ನು ಕೊಂಚಕಾಲ ಮೊಟಕುಗೊಳಿಸಿ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಲು ನೆರವಾದರು.

Advertisement

Udayavani is now on Telegram. Click here to join our channel and stay updated with the latest news.

Next